ಎರಡು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…

ಬೆಂಗಳೂರು,ನವೆಂಬರ್,10,2020(www.justkannada.in):  ಕುತೂಹಲ ಕೆರಳಿಸಿರುವ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಎರಡೂ ಕ್ಷೇತ್ರದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ.kannada-journalist-media-fourth-estate-under-loss

ಆರ್.ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 69 484 ಮತಗಳನ್ನ ಪಡೆದು ಮುನ್ನಡೆ ಸಾಧಿಸಿದರೇ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 36,299 ಮತಗಳನ್ನ ಪಡೆದು ಹಿನ್ನಡೆ ಅನುಭವಿಸಿದ್ದಾರೆ. ಇನ್ನು ಶಿರಾ ಕ್ಷೇತ್ರದಲ್ಲಿ 12ನೇ ಸುತ್ತಿನ ಮತಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 7870 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.bjp-lead-two-constituencies-kpcc-president-dk-sivakumar-reaction

ಇನ್ನು ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ್ದು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮತದಾರರ ತೀರ್ಪಿಗೆ ಎಲ್ಲರೂ ತಲೆ ಭಾಗಬೇಕು. ಇನ್ನು ಫಲಿತಾಂಶ ಹೊರಬೀಳಲು ಒಂದು ಗಂಟೆ ಸಮಯ ಇದೆ. ಉಪಚುನಾವಣೆಯಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿದ್ದಾರೆ.

Key words: BJP- lead – two constituencies-KPCC President- DK Sivakumar -reaction