‘’ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೋಟಿಸ್’’ : ಅರುಣ್ ಸಿಂಗ್ ಸೂಚನೆ…!

ಬೆಂಗಳೂರು,ಜನವರಿ,03,2021(www.justkannada.in) : ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ನೋಟಿಸ್ ನೀಡುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೂಚಿಸಿದ್ದಾರೆ.jk-logo-justkannada-mysore

ನಿನ್ನೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಯತ್ನಾಳ್ ಅವರ ಹೇಳಿಕೆಗಳ ಕುರಿತು ಪ್ರಸ್ತಾಪಿಸಿದ್ದಾರೆ.

ಈ ಕುರಿತು ಅರುಣ್ ಸಿಂಗ್ ಪ್ರತಿಕ್ರಿಯಿಸಿ ಯತ್ನಾಳ್ ಗೆ ನೋಟಿಸಿ ನೀಡಿ, ಕರೆದು ಮಾತನಾಡಿ ಎಂದು ಹೇಳಿದ್ದಾರೆ.

ಇದಕ್ಕೆ ಕಮಿಟಿ ಸದಸ್ಯರು ಈಗಾಗಲೇ ಹಲವು ಬಾರಿ ಮಾತುಕತೆಯಾಗಿದೆ. ಹೀಗಾಗಿಯೂ, ಅವರು ಬಹಿರಂಗ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿಲ್ಲ ಎಂದು ಹೇಳಿದ್ದಾರೆ.

 

key words : BJP MLA-Basavanagowda Patil Yatnal-Notice-Arun Singh-NOTE …!