ಸಿಎಂ ಬಿಎಸ್  ಯಡಿಯೂರಪ್ಪರನ್ನ ಭೇಟಿಯಾಗಿ ಚರ್ಚಿಸಿದ ಬಿಜೆಪಿ ರಾಷ್ಟ್ರಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್..

ಬೆಂಗಳೂರು,ಜ,25,2020(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ವಿದೇಶ ಪ್ರವಾಸ ಮುಗಿದು ರಾಜ್ಯಕ್ಕೆ ಆಗಮಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಸಚಿವ ಸಂಪುಟ  ವಿಸ್ತರಣೆಗೆ ಕಸರತ್ತು ಜೋರಾಗಿದೆ.

ಈ ನಡುವೆ ಸಿಎಂ ನಿವಾಸ ಡಾಲರ್ಸ್ ಕಾಲೋನಿಯಲ್ಲಿ ಸಿಎಂ ಬಿಎಸ್  ಯಡಿಯೂರಪ್ಪರನ್ನ ಬಿಜೆಪಿ ರಾಷ್ಟ್ರಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿಯಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.  ಸಿಎಂ ಬಿಎಸ್ ವೈ ಜತೆ 15 ನಿಮಿಷಗಳ ಕಾಲ ಬಿ.ಎಲ್ ಸಂತೋಷ್ ಅವರು ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನಕ್ಕಾಗಿ ಕಾದು ಕುಳಿತಿರುವ ಆಕಾಂಕ್ಷಿಗಳಿಗೆ ಮೂರ್ನಾಲ್ಕು ದಿನಗಳಲ್ಲಿ ಸಿಹಿಸುದ್ದಿ ನೀಡುವ ಭರವಸೆಯನ್ನ ಸಿಎಂ ಬಿಎಸ್ ಯಡಿಯೂರಪ್ಪ ಈಗಾಗಲೇ ಕೊಟ್ಟಿದ್ದಾರೆ. ಅಮಿತ್ ಶಾ ಅವರ ಜತೆ ಮತ್ತೊಮ್ಮೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ  ಮಾಡಲಾಗುವುದು ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ. ಹೀಗಾಗಿ ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.

Key words: BJP National Organization General Secretary- BL Santosh-met -CM BS Yeddyurappa -discussed