ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ: ಯಾವುದೇ ಗೊಂದಲಗಳಿಲ್ಲ- ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಜೂನ್,15,2021(www.justkannada.in):  ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.jk

ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲಗಳಿಲ್ಲ. ರಾಜ್ಯಕ್ಕೆ ನಾಳೆ ಅರುಣ್ ಸಿಂಗ್ ಭೇಟಿ ನೀಡುತ್ತಿದ್ದು, ಯಾರೇ ಬೇಕಾದರೂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಬಹುದು ಎಂದರು.

ಯಾರೋ ಒಂದಿಬ್ಬರಿಗೆ ಬೇಸರವಿರಬಹುದು. ಅಂತವರನ್ನು ಕರೆದು ಅರುಣ್ ಸಿಂಗ್ ಮಾತನಾಡುತ್ತಾರೆ ಎಲ್ಲಾ ವಿಚಾರಗಳನ್ನೂ ತಿಳಿದುಕೊಳ್ಳುತ್ತಾರೆ. ಇನ್ನು ಬಿಜೆಪಿಯ ಎಲ್ಲಾ ಶಾಸಕರು, ಸಂಸದರ ಜೊತೆಯೂ ಅರುಣ್ ಸಿಂಗ್ ಚರ್ಚೆ ನಡೆಸಲಿದ್ದಾರೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

Key words: BJP-no distractions-CM- BS Yeddyurappa-clearify