ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೇ ದಕ್ಷಿಣ ಭಾರತದಲ್ಲಿ ಕರ್ನಾಟಕ ನಂ.1 ಮಾಡುತ್ತೇವೆ- ಕೇಂದ್ರ ಗೃಹಸಚಿವ ಅಮಿತ್ ಶಾ.

ಬಳ್ಳಾರಿ,ಫೆಬ್ರವರಿ,23,2023(www.justkannada.in): ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ  ದಕ್ಷಿಣ ಭಾರತದಲ್ಲಿ ಕರ್ನಾಟಕ ನಂ.1 ಮಾಡುತ್ತೇವೆ.  ಮುಂದಿನ 5 ವರ್ಷ ಭ್ರಷ್ಟಾಚಾರ ಮುಕ್ತ ಆಡಳಿತ  ನೀಡುತ್ತೇವೆ ಎಂದು  ಕೇಂದ್ರ ಗೃಹಸಚಿವ ಅಮಿತ್ ಶಾ ನುಡಿದರು.

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದ ಬಿಜೆಪಿ ಜನಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ, ಸಂಡೂರಿನ ಕುಮಾರಸ್ವಾಮಿ ದೇವರಿಗೆ ನನ್ನ ನಮಸ್ಕಾರಗಳು . ಕಾಂಗ್ರೆಸ್ ಜೆಡಿಎಸ್ ಎರಡೂ ಪರಿವಾರವಾದಿ ಪಕ್ಷಗಳು. ಪರಿವಾರವಾದಿ ಪಕ್ಷಗಳಿಂದ  ಬಡವರ ಕಲ್ಯಾಣವಾಗುವುದಿಲ್ಲ. ಸಿದ್ಧರಾಮಯ್ಯ ಅವಧಿಯಲ್ಲಿ ಕರ್ನಾಟಕ ಕಾಂಗ್ರೆಸ್ ನ  ಹೈಕಮಾಂಡ್  ಗೆ ಎಟಿಎಂ ಆಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಕರ್ನಾಟಕ ದೆಹಲಿಯ ಎಟಿಎಂ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಪಿಎಫ್ ಐ ಸಂಘಟನೆ ನಿಷೇಧ ಮಾಡಿದರು. ಕಾಂಗ್ರೆಸ್ ಅವಧಿಯಲ್ಲಿ ಪಿಎಫ್ ಐ ಮೇಲಿನ ಕೇಸ್ ಗಳನ್ನ ಹಿಂಪಡೆದರು.  ಹಲವು ಬಾರಿ ಪಾಕ್ ನಿಂದ ದಾಳಿಯಾದರೂ ಯುಪಿಎ ಮೌನ ವಹಿಸಿತ್ತು. ಆದರೆ ಮೋದಿ ಸರ್ಕಾರ ಬಂದ ಮೇಳೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವೆ . ವೈರಿ ರಾಷ್ಟ್ರ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಈ ಬಾರಿ ಪೂರ್ಣ ಬಹುಮತದಲ್ಲಿ ಬಿಜೆಪಿ ಅಧಿಕಾರಕ್ಕೆ  ಬರಲಿದೆ. ಗ್ಯಾಸ್ ಸಂಪರ್ಕ ಶೌಚಾಲಯ ನಿರ್ಮಾಣ ಮಾಡಿಕೊಟ್ಟಿದ್ದೇವೆ.  ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದೇವೆ ಎಂದರು.

ರಾಜ್ಯದಲ್ಲಿ ಡಿಕೆ ಶಿವಕುಮಾರ್ ಸಿದ್ಧರಾಮಯ್ಯ ಪರಸ್ಪರ ಹೊಡೆದಾಡುತ್ತಿದ್ದಾರೆ. ಇವರಿಬ್ಬರ ಹೊಡೆದಾಟದಿಂದ ರಾಜ್ಯ ಅಭಿವೃದ್ದಿಯಾಗಲ್ಲ ಎಂದರು.

Key words: BJP – power – Karnataka- number 1 – South India – Union Home Minister -Amit Shah.