ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿದ ಲಕ್ಷ್ಮಣ್ ಸವದಿಯನ್ನ ಸಂಪುಟದಿಂದ ಕೈ ಬಿಡುವಂತೆ ಆಗ್ರಹ: ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ….

ಬೆಂಗಳೂರು,ಆ,31,2019(www.justkannada.in): ಸದನದಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ  ಲಕ್ಷ್ಮಣ್ ಸವದಿಯವರನ್ನು  ಸಚಿವ ಸಂಪುಟದಿಂದ ಕೈಬಿಡುವಂತೆ ಬಿಜೆಪಿ ಹೈಕಮಾಂಡ್ ಗೆ ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ನಗರದ ಮಲೇಶ್ವರದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ  ಪುಷ್ಪಾ ಅಮರ್ ನಾಥ್ ನೇತೃತ್ವದಲ್ಲಿ  ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿದ ಲಕ್ಷ್ಮಣ್ ಸವದಿಯನ್ನ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಧರಣಿ ನಡೆಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್, ಲಕ್ಷ್ಮಣ ಸವದಿಯವರನ್ನು ಕೈ ಬಿಡುವವರೆಗೂ  ರಾಜ್ಯದೆಲ್ಲಡೆ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಸಿದ್ದರಾಮಯ್ಯ ಶೋಭಾ ಕರಂದ್ಲಾಜೆಯವರನ್ನು ಕುರಿತು ಆಡಿದ ಮಾತು ಗ್ರಾಮ್ಯ ಭಾಷೆಯಲ್ಲಿದ್ದು ಇದನ್ನು ತಪ್ಪಾಗಿ ತಿಳಿದುಕೊಳ್ಳವುದು ಬೇಡ. ಅವರಿಗೂ ಮಹಿಳೆಯರ ಬಗ್ಗೆ ಗೌರವವಿದೆ . ಬಿಜೆಪಿಯ ಮಹಿಳಾ ಕಾರ್ಯಕರ್ತರು ಇದನ್ನು ವಿರೋಧಿಸಬೇಕಿತು ಎಂದು ಹೇಳಿದರು.

Key words: blue film – Remove – Laxman savadi- cabinet-  Protest – KPCC Women’s Unit