ಬಿಎಸ್ ವೈ ಅಂತವರನ್ನೇ ಮನೆಗೆ ಕಳುಹಿಸಿರುವಾಗ ಬೊಂಬೆ ಬೊಮ್ಮಾಯಿ ಯಾವ ಲೆಕ್ಕ..? ಮತ್ತೆ ಕಾಂಗ್ರೆಸ್ ಟ್ವೀಟ್.

ಬೆಂಗಳೂರು,ಆಗಸ್ಟ್,10,2022(www.justkannada.in):  ಸಿಎಂ ಬದಲಾವಣೆ  ಕುರಿತು ಕಾಂಗ್ರೆಸ್  ಮಾಡಿದ್ದ ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ರಾಜ್ಯ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ವಿರುದ್ಧ ಅಂಥದ್ದೇ ಮತ್ತೊಂದು ಟ್ವೀಟ್ ಅಸ್ತ್ರ ಪ್ರಯೋಗಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್,  ‘ಬಿಜೆಪಿ ಹೈಕಮಾಂಡ್​ ಪಾಲಿಗೆ ಕರ್ನಾಟಕದ ಮುಖ್ಯಮಂತ್ರಿಗಳೆಂದರೆ ಆಟಿಕೆ ಮುಖ್ಯಮಂತ್ರಿಗಳಿದ್ದಂತೆ ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ.ಬಿ.ಎಸ್.ಯಡಿಯೂರಪ್ಪ ಅವರಂಥ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ‘ಬೊಂಬೆ ಬೊಮ್ಮಾಯಿ’  ಯಾವ ಲೆಕ್ಕ ಎಂದು ವ್ಯಂಗ್ಯವಾಡಿದೆ.

‘ಸಂತೋಷ ಕೂಟ’ಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ ಮತ್ತು ವೈಫಲ್ಯಗಳ ಕೊಡ ತುಂಬಿದೆ. ಈ ಹಿಂದೆ ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸಲು ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ ಕೈಗೊಂಬೆ ಮುಖ್ಯಮಂತ್ರಿಗೆ ಸಂಪುಟ ಸಂಕಟ ಬಗೆಹರಿಸಲು ಸಾಧ್ಯವಾಗಿಲ್ಲ  ಎಂದು ಕಾಂಗ್ರೆಸ್ ಟೀಕಿಸಿದೆ.

Key words: Bombe Bommai –cm-home-Congress- tweet- again