ವಿಧಾನಪರಿಷತ್ ಸಭಾಪತಿ ಚುನಾವಣೆ: ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಬ್ರೇಕ್.

ಬೆಂಗಳೂರು,ಸೆಪ್ಟಂಬರ್,15,2022(www.justkannada.in):  ವಿಧಾನಪರಿಷತ್ ನೂತನ ಸಭಾಪತಿ ಚುನಾವಣೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ಧ ನಿರ್ಣಯಕ್ಕೆ ತಡೆ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ನೂತನ ಸಭಾಪತಿ ಚುನಾವಣೆಗೆ ಬ್ರೇಕ್ ಬಿದ್ದಿದೆ.

ಸಭಾಪತಿ ಚುನಾವಣೆ ಮಾಡದಿರಲು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ  ನೀಡಿದ್ದಾರೆ. ಪಕ್ಷದ ನಾಯಕರ ಸಲಹೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ನೂತನ ಸಭಾಪತಿ ಚುನಾವಣೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಇಂದು   ಭೇಟಿಯಾಗಿ . ಚುನಾವಣೆಗೆ ಅಧಿಸೂಚನೆ ಹೊರಡಿಸಲು ಶಿಫಾರಸು ಮಾಡಬೇಕಿತ್ತು. ಆದರೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಪಾಲರ ಭೇಟಿ ಮುಂದೂಡಿದ್ದಾರೆ.

Key words: Break – election –cm bommai-legislative council