ಸಿಎಂ ಸ್ಥಾನಕ್ಕೆ ಬಿಎಸ್ ವೈ ರಾಜೀನಾಮೆ ಹಿನ್ನೆಲೆ: ಶಿವಮೊಗ್ಗ ಸೇರಿ ಹಲವೆಡೆ ಪ್ರತಿಭಟನೆ.

ಶಿವಮೊಗ್ಗ,ಜುಲೈ,26,2021(www.justkannada.in0:  ಸಿಎಂ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆ ಕೇಂದ್ರದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಸೇರಿ ಹಲವೆಡೆ ಬಿಎಸ್ ವೈ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.jk

ಬಿಎಸ್ ವೈ ತವರು ಶಿಕಾರಿಪುರದಲ್ಲಿ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಇಲ್ಲಿನ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಬಿಎಸ್ ವೈ ಅವರನ್ನೇ ಸಿಎಂ ಆಗಿ ಮುಂದುವರೆಸಿ. ಬಿಎಸ್ ವೈ ಇಲ್ಲದಿದ್ದರೇ ಬಿಜೆಪಿ ಸರ್ವನಾಶ ಎಂದು ಎಚ್ಚರಿಕೆ ನೀಡಿದರು.

ಇನ್ನು  ಯಾದಗಿರಿಯ ಸುಭಾಷ್ ವೃತ್ತದಲ್ಲಿ ವೀರಶೈವ ಲಿಂಗಾಯಿತ ಯುವಘಟಕದಿಂದ ಟೈರ್ ಗೆ ಬೆಂಕಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಹೈಕಮಾಂಡ್ ವಿರುದ್ಙ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Key words: BS Yeddyurappa- resignation – CM position-protests