ಉದ್ಯಮಿ ಸಿದ್ಧಾರ್ಥ್ ನಿಧನಕ್ಕೆ ಸದನದಲ್ಲಿ ಸಂತಾಪ: ಅಂತಿಮ ದರ್ಶನಕ್ಕೆ ತೆರಳಲಿರುವ ಸಿಎಂ ಬಿಎಸ್ ಯಡಿಯೂರಪ್ಪ…..

ಬೆಂಗಳೂರು,ಜು,31,2019(www.justkannada.in):  ಕೆಫೆ ಕಾಫಿ ಡೇ ಸಂಸ್ಥಾಪಕ, ಉದ್ಯಮಿ  ವೈ ಜಿ ಸಿದ್ಧಾರ್ಥ್ ಅವರ ನಿಧನಕ್ಕೆ ಸದನದಲ್ಲಿ ಇಂದು ಸಂತಾಪ ಸೂಚಿಸಲಾಯಿತು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿ ವೈ ಜಿ ಸಿದ್ಧಾರ್ಥ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ನನಗೆ ಮೊದಲೇ ತುಂಬ ದು:ಖವಾಗಿದೆ. ಸಭಾಧ್ಯಕ್ಷರ ಅನುಮತಿ ಪಡೆದು ಚಿಕ್ಕಮಗಳೂರಿಗೆ ಹೊರಡುತ್ತೇನೆ ಎಂದರು.

ಉದ್ಯಮಿ ಸಿದ್ಧಾರ್ಥ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಸಿಎಂ ಬಿ.ಎಸ್ ಯಡಿಯೂರಪ್ಪ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ಸಿದ್ಧಾರ್ಥ್ ಅವರ ಪಾರ್ಥೀವ ಶರೀರವನ್ನ ಚಿಕ್ಕಮಗಳೂರಿನಲ್ಲಿ ಅಂತಿಮದರ್ಶನಕ್ಕೆ ಇಡಲು ವ್ಯವಸ್ಥೆ ಮಾಡಲಾಗಿದೆ. 2 ಗಂಟೆಯಿಂದ 4.30ರವರೆಗೆ ಅಂತಿದರ್ಶನಕ್ಕೆ ಅವಕಾಶ ಮಾಡಲಾಗಿದೆ. ನಂತರ ಹುಟ್ಟೂರು ಚೇತನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಸಿಎಂ ಬಿಎಸ್ ಯಡಿಯೂರಪ್ಪ ಸಿದ್ಧಾರ್ಥ್ ಅವರ ಅಂತಿಮ ದರ್ಶನ ಪಡೆಯಲು ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ತೆರಳಲಿದ್ದಾರೆ.

Key words: Businessman –Siddharth- death -Condolences –assembly-CM BS Yeddyurappa