ಕಾಂಗ್ರೆಸ್ ಗ್ರಾಮ ಜನಾಧಿಕಾರ ಸಮಾವೇಶ: ಸಿ.ಎಂ ಇಬ್ರಾಹಿಂ ಜೆಡಿಎಸ್‌ ಗೆ ಹೋಗುವುದಿಲ್ಲ ಎಂದ ಮಾಜಿ ಸಿಎಂ ಸಿದ್ಧರಾಮಯ್ಯ …

ಮೈಸೂರು,ಡಿಸೆಂಬರ್,18,2020(www.justkannada.in): ಕಾಂಗ್ರೆಸ್ ಮುಖಂಡ  ಸಿಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಾಗುವ ಬಗ್ಗೆ ಚರ್ಚೆಯಾಗುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ , ನನ್ನ ಪ್ರಕಾರ ಸಿ.ಎಂ. ಇಬ್ರಾಹಿಂ ಜೆಡಿಎಸ್‌ಗೆ ಹೋಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.Teachers,solve,problems,Government,bound,Minister,R.Ashok

ಇಂದು ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಗ್ರಾಮ ಜನಾಧಿಕಾರ ಸಮಾವೇಶ ನಡೆಯುತ್ತಿದೆ. ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಧ್ರುವನಾರಾಯಣ್, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾಧು, ಎಂಎಲ್ಸಿ ಧರ್ಮಸೇನಾ, ಮಾಜಿ ಶಾಸಕರಾದ ಸೋಮಶೇಖರ್, ಕಳಲೆ‌ ಕೇಶವಮೂರ್ತಿ, ಕೆ.ವೆಂಕಟೇಶ್, ಹರೀಶ್ ಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ.  ಸಮಾವೇಶಕ್ಕೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಗೈರಾಗಿದ್ದಾರೆ.

c-m-ibrahim-jds-former-cm-siddaramaiah-mysore-chamundeshwari-constituency
ಕೃಪೆ- internet

ಇನ್ನು ಸಿಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿದ್ಧರಾಮಯ್ಯ, ನನ್ನ ಪ್ರಕಾರ ಸಿ.ಎಂ. ಇಬ್ರಾಹಿಂ ಜೆಡಿಎಸ್‌ಗೆ ಹೋಗುವುದಿಲ್ಲ. ಅವರು ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯರು. ನನ್ನ ಪ್ರಕಾರ ಅವರು ಕಾಂಗ್ರೆಸ್ ಪಕ್ಷ ತ್ಯಜಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Key words: C.M Ibrahim- JDS- Former CM- Siddaramaiah- mysore-chamundeshwari- constituency