ಸಚಿವ ಸಂಪುಟ ವಿಸ್ತರಣೆ ವಿಚಾರ: ಜನವರಿ 12 ಅಥವಾ 13 ರಂದು ನವದೆಹಲಿಗೆ ಹೋಗ್ತೇನೆ ಎಂದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಜ,9,2020(www.justkannada.in):  ಸಚಿವ ಸಂಪುಟ ವಿಸ್ತರಣೆ ವಿಚಾರ ಸಂಬಂಧ ಜನವರಿ 12 ಅಥವಾ 13 ರಂದು ನವದೆಹಲಿಗೆ ಹೋಗುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಜನವರಿ 12 ಅಥವಾ 13 ರಂದು ನವದೆಹಲಿಗೆ ಹೋಗ್ತೇನೆ. ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ ಬೇರೆ ಬೇರೆ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇನೆ.  ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

ಇನ್ನು ಫೆಬ್ರವರಿ 26ರಿಂದ ಮಾರ್ಚ್4 ರವರೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಿತ್ರೋತ್ಸವ ನಡೆಯಲಿದೆ. ಚಿತ್ರೋತ್ಸವದಲ್ಲಿ 200 ಚಿತ್ರಗಳು ಪ್ರದರ್ಶನಗೊಳ್ಳಲಿವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: Cabinet expansion-CM BS Yeddyurappa – January 12 or 13-New Delhi.