ಸಂಪುಟ ವಿಸ್ತರಣೆ ವಿಚಾರ: ಸಿಎಂ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಎಂಟಿಬಿ ನಾಗರಾಜ್…

ಬೆಂಗಳೂರು,ಸೆಪ್ಟಂಬರ್,18,2020(www.justkannada.in):  ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರ ಜತೆ ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ನವದೆಹಲಿಗೆ ತೆರಳಿದ್ದು ಈ ಕುರಿತು ಎಂಎಲ್ ಸಿ ಎಂಟಿಬಿ ನಾಗರಾಜ್  ಪ್ರತಿಕ್ರಿಯಿಸಿದ್ದಾರೆ.jk-logo-justkannada-logo

ಸಂಪುಟ ವಿಸ್ತರಣೆ ಅಥವಾ ಪುನರಚನೆ ಸಂಬಂಧ  ಸಿಎಂ ಮತ್ತು ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.cabinet-expansion-mtb-nagaraj-cm-high-command

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಎಂಟಿಬಿ ನಾಗರಾಜ್,  ಇತ್ತೀಚೆಗೆ ನಾನು ಮತ್ತು ಆರ್ ಶಂಕರ್ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿದ್ದವು. ಈ ವೇಳೆ ಈ ವೇಳೆ ಸಂಪುಟ ವಿಸ್ತರಣೆ ಅಥವಾ ಪುನರಚನೆ ಬಗ್ಗೆ ಭರವಸೆ ನೀಡಿದ್ದರು. ಹೈಕಮಾಂಡ್ ಭೇಟಿಯಾಗಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು. ಹೀಗಾಗಿ ನಾವು ನಿರೀಕ್ಷೆಯಲ್ಲಿದ್ದೇವೆ ಎಂದಿದ್ದಾರೆ.

Key words:  cabinet expansion -MTB Nagaraj –CM- High Command