ಮೈಸೂರಿನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು…..

ಮೈಸೂರು,ಏಪ್ರಿಲ್,21,2021(www.justkannada.in):  ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳನ್ನ ತಡೆಗಟ್ಟಲು ಸರ್ಕಾರವು ಹೊರಡಿಸಿರುವ ನಿಯಮಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಮೈಸೂರು ನಗರ ಪೊಲೀಸರು ಪರಿಶೀಲಿಸಿ ಕಾನೂನು ರೀತಿ ಕ್ರಮ ಕೈಗೊಂಡಿದ್ದಾರೆ. jk

ಕೋವಿಡ್-19 ಹರಡುವಿಕೆಯ 2ನೇ ಅಲೆ ತಡೆಗಟ್ಟಲು  ಸರ್ಕಾರವು ಕಟ್ಟುನಿಟ್ಟಿನ ನಿಯಮಗಳನ್ನು ಹೊರಡಿಸಿದೆ. ಈ ಹಿನ್ನೆಲೆಯಲ್ಲಿ  ಮೈಸೂರು ನಗರದ ಪೊಲೀಸರು ನಿನ್ನೆ ನಗರದ ವಿವಿಧ ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ಸರ್ಕಾರದ ನಿಯಮಗಳನ್ನ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಾಮಾಜಿಕ ಅಂತರವಿಲ್ಲದೆ. ಮಾಸ್ಕ್ ಧರಿಸದೆ ಇರುವ ಸಾರ್ವಜನಿಕರು/ಗ್ರಾಹಕರೊಂದಿಗೆ ವ್ಯಾಪಾರ ವ್ಯವಹಾರ ನಡೆಸುವ ಮೂಲಕ ಕೋವಿಡ್ 19 ನಿಯಮಗಳನ್ನು ಉಲ್ಲಂಘನೆ ಮಾಡಿರುವವರ ವಿರುದ್ಧ ಭಾರತೀಯ ದಂಡ ಸಂಹಿತೆ (ಐ.ಪಿ.ಸಿ) ಹಾಗೂ The Disaster Management act 2005ರ ಅಡಿಯಲ್ಲಿ ಈ ಕೆಳಕಂಡಂತೆ ಕಾನೂನಾತ್ಮಕವಾಗಿ ಕ್ರಮ ಕೈಗೊಂಡಿದ್ದಾರೆ. .

ಸರಸ್ವತಿಪುರಂ ಪೊಲೀಸ್ ವ್ಯಾಪ್ತಿಯ ಬೋಗಾದಿ ರಿಂಗ್ ರಸ್ತೆಯ ಸಿಗ್ನಲ್ ಹತ್ತಿರ ಇರುವ ಚಾಮುಂಡೇಶ್ವರಿ  ಬಿರಿಯಾನಿ ಹೋಟೇಲ್‌ ನ ಕೆಲಸಗಾರ ಧನುಶ್ ಕೆ. ಗೌಡ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹಾಗೆಯೇ ಜಯಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸೂರು ಮುಖ್ಯ ರಸ್ತೆಯಲ್ಲಿರುವ ಬಿ ಎಂ ಹ್ಯಾಬಿಟಾಟ್ ಮಾಲ್‌ನ ಬಳಿ ಇರುವ ಹೋಟೆಲ್ ಲೊಪ್, ಕೆಫೆ, ವೆಜ್ ರೆಸ್ಟೋರೆಂಟ್‌ನ ಮಾಲೀಕ ರವಿಕಿರಣ್  ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉದಯಗಿರಿ ಪೊಲೀಸ್ ಠಾಣಾ ಸರಹದ್ದಿನ ರಾಜೀವ್‌ನಗರ ರಿಂಗ್ ರಸ್ತೆ, ಯಾಸೀನ್ ಮಸೀದಿ ಹತ್ತಿರವಿರುವ ಯಾಸೀನ್ ರೆಸ್ಟೋರೆಂಟ್‌ ನ ಹೋಟೆಲ್‌ ನ ಮಾಲೀಕ ನಾಸೀರ್‌ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.Case- filed -against -violators -covid Law - Mysore

ಇನ್ನು ಉದಯಗಿರಿ ಪೊಲೀಸ್ ಠಾಣಾ ಸರಹದ್ದಿನ ಅಬ್ದುಲ್ ರೆಹಮಾನ್ ರಸ್ತೆ, ಕ್ಯೂಬಾ ಮಸೀದಿ ಹತ್ತಿರವಿರುವ ಮದೀನಾ ಪ್ರಾವಿಜನ್ ಸ್ಟೋರ್ ಮಾಲೀಕ ಮಾನ್ಸೂರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಮಾತನಾಡಿರುವ ನಗರದ ಪೊಲೀಸ್ ಆಯುಕ್ತಡಾ: ಚಂದ್ರಗುಪ್ತ, ಕೋವಿಡ್-19 ನಿಯಮಗಳ ಜಾರಿ ಸಂಬಂಧ ನಗರ ಪೊಲೀಸರು ಇದೇ ರೀತಿ ಪ್ರತಿ ದಿನ ಸಾರ್ವಜನಿಕರು ಹೆಚ್ಚು ಸೇರುವ ಸ್ಥಳಗಳ ಕಡೆ ಭೇಟಿ ನೀಡಿ ಪರಿಶೀಲಿಸಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಿದ್ದು. ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರಿಗೆ ಸ್ಥಳದಲ್ಲಿ ದಂಡ  ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Key words: Case- filed -against -violators -covid Law – Mysore