ಸಿಡಿ ಪ್ರಕರಣ: ಸಂತ್ರಸ್ತ ಯುವತಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ…

ಬೆಂಗಳೂರು,ಮಾರ್ಚ್,30,2021(www.justkannada.in):  ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಡಿ ಸಂತ್ರಸ್ತ ಯುವತಿಯ ಹೇಳಿಕೆ ದಾಖಲಿಸಲು 24 ನೇ ಎಸಿಎಂಎಂ ಕೋರ್ಟ್ ಅನುಮತಿ ನೀಡಿದೆ ಎನ್ನಲಾಗಿದೆ.Government,Social,Economic,Educational,survey,Report,Should,receive,Former CM,Siddaramaiah 

ಇಂದು ಸಿಡಿ ಲೇಡಿ ಪರ ವಕೀಲ ಜಗದೀಶ್ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದು, ಈ ವಿಚಾರಣೆ ನಡೆಸಿದ ಕೋರ್ಟ್ ಯುವತಿಯ ಹೇಳಿಕೆ ಪಡೆಯಲು ಕೋರ್ಟ್ ಅನುಮತಿ ನೀಡಿದೆ ಎನ್ನಲಾಗಿದೆ.

ಮೊದಲು ಸಿಆರ್ ಪಿಸಿ 164ರ ಅಡಿ ಯುವತಿ ಹೇಳಿಕೆ ದಾಖಲಿಸಿಕೊಳ್ತೇವೆ. ಬಳಿಕ ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಲಿ. ಮೊದಲು ಯುವತಿ ಹೇಳಿಕೆ ಪಡೆಯುತ್ತೇವೆ. ಹೇಳಿಕೆ ಪಡೆದ ನಂತರ ತನಿಖಾಧಿಕಾರಿಗೆ ಒಪ್ಪಿಸುತ್ತೇವೆ ಎಂದು 24 ನೇ ಎಸಿಎಂಎಂ ಕೋರ್ಟ್  ನ್ಯಾಯಾಧೀಶರು ತಿಳಿಸಿದ್ದಾರೆ ಎನ್ನಲಾಗಿದೆ.CD case- Court -permits - file - statement

ಯುವತಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ. ಸಂತ್ರಸ್ತ ಯುವತಿ ಯಾವಾಗ ಬೇಕಾದರೂ ಹಾಜರಾಗುವ ಸಾಧ್ಯತೆ ಇದೆ.

Key words:  CD case- Court -permits – file – statement.