ಜ್ವರ, ತಲೆನೋವು, ತಲೆನೋವು, ಗಂಟಲು ನೋವು, ಉಸಿರಾಟದ ತೊಂದರೆ ಇದ್ದರೆ ಕೋವಿಡ್ ಶಂಕಿತ ಪ್ರಕರಣವೆಂದೇ ಪರಿಗಣಿಸಿ ಎಂದ ಕೇಂದ್ರ ಆರೋಗ್ಯ ಇಲಾಖೆ

kannada t-shirts

ಬೆಂಗಳೂರು, ಜನವರಿ 02, 2021 (www.justkannada.in): ಜ್ವರ, ತಲೆನೋವು, ಗಂಟಲು ನೋವು, ಉಸಿರಾಟದ ತೊಂದರೆ, ಮೈ ಕೈ ನೋವು, ರುಚಿ ಅಥವಾ ವಾಸನೆ ಗ್ರಹಿಕೆ ಕಳೆದುಕೊಳ್ಳುವುದು, ಅತಿಯಾದ ಆಯಾಸ ಹಾಗೂ ಅತಿಸಾರದಂತಹ ಲಕ್ಷಣ ಹೊಂದಿರುವವರನ್ನು ಕೋವಿಡ್​ 19 ಶಂಕಿತ ಪ್ರಕರಣವೆಂದು ಗಣನನೆಗೆ ತೆಗೆದುಕೊಳ್ಳುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ.

ಕೆಮ್ಮು, ತಲೆನೋವು, ಗಂಟಲು ನೋವು, ಉಸಿರಾಟದ ತೊಂದರೆ, ದೇಹಾಯಾಸ, ರುಚಿ ಅಥವಾ ವಾಸನೆಯ ಗ್ರಹಿಕೆ ಕಳೆದುಕೊಳ್ಳುವುದು, ಅತಿಸಾರ, ಜ್ವರ ಹೀಗೆ ಯಾವುದೇ ಲಕ್ಷಣಗಳಿಂದ ಬಳಲುತ್ತಿರುವ ವ್ಯಕ್ತಿಯನ್ನು ಕೋವಿಡ್​ ಶಂಕಿತನೆಂದು ಪರಿಗಣಿಸಿ ಪ್ರತ್ಯೇಕವಾಗಿ ಇಟ್ಟು ಚಿಕಿತ್ಸೆ ನೀಡುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್​ ತಿಳಿಸಿದ್ದಾರೆ.

ವಿವಿಧ ಸ್ಥಳಗಳಲ್ಲಿ ಕ್ಲಾಕ್​ ಫಂಕ್ಷನಲ್​​ ಬೂತ್​​ಗಳನ್ನು ಸಿದ್ಧಪಡಿಸಿ. ವೈದ್ಯಕೀಯ ಹಾಗೂ ಅರೆವೈದ್ಯಕೀಯ ಸಿಬ್ಬಂದಿಯನ್ನು ಬಳಸಿಕೊಳ್ಳಿ. ಹೋಮ್​ ಟೆಸ್ಟ್​ ಕಿಟ್​ಗಳ ಬಳಕೆಗೆ ಜನರನ್ನು ಉತ್ತೇಜಿಸಬೇಕೆಂದು ನಿರ್ದೇಶನ ನೀಡಲಾಗಿದೆ.

website developers in mysore