ಹುಟ್ಟುಹಬ್ಬದಂದೇ ನೇಣಿಗೆ ಶರಣಾದ ಉಪನ್ಯಾಸಕಿ.

ಚಾಮರಾಜನಗರ,ಆಗಸ್ಟ್,9,2022(www.justkannada.in): ಹುಟ್ಟುಹಬ್ಬದಂದೇ ಉಪನ್ಯಾಸಕಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರದ JSS ಹಾಸ್ಟೆಲ್ ನಲ್ಲಿ ಉಪನ್ಯಾಸಕಿ ಚಂದನಾ(26) ಡೆತ್  ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿ ಚಂದನಾ, ನನ್ನ ಸಾವಿಗೆ ನಾನೇ ಕಾರಣವೆಂದು ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಚಾಮರಾಜನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: chamaraja nagar-lecturer-suciude.