ಚಾಮುಂಡಿ ಬೆಟ್ಟದಲ್ಲಿ ಅರ್ಧಕ್ಕೆ ನಿಂತ ಮಳಿಗೆಗಳ ನಿರ್ಮಾಣ : 4 ಕೋಟಿ ರೂ. ಬಿಡುಗಡೆಗೆ ಸಂಸದ ಪ್ರತಾಪ್ ಸಿಂಹ ಮನವಿ

ಮೈಸೂರು,ಏಪ್ರಿಲ್,05,2021(www.justkannada.in) : ಚಾಮುಂಡಿ ಬೆಟ್ಟದಲ್ಲಿ ಅರ್ಧಕ್ಕೆ ನಿಂತಿರುವ ಮಳಿಗೆಗಳ ನಿರ್ಮಾಣಕ್ಕೆ ಬೇಕಾದ 4 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಜರಾಯಿ ಇಲಾಖೆ ಸಚಿವ  ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಸಂಸದ ಪ್ರತಾಪ್ ಸಿಂಹ ಭೇಟಿ ಮಾಡಿ ಮನವಿ ಮಾಡಿದ್ದಾರೆ.Illegally,Sand,carrying,Truck,Seized,arrest,driver

ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದ ಪ್ರತಾಪ್ ಸಿಂಹ ಮನವಿಗೆ ಪೂರಕವಾಗಿ ಸ್ಪಂದಿಸಿದ್ದು, ಇದೇ ತಿಂಗಳ 9ನೇ ತಾರೀಖು ಸಭೆ ಕರೆದು ಅನುಮೋದನೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

key words : Chamundi Hill-Stop-Construction-stores-4 Crore-release-MP-Pratap shinmha-Appeal