ಸೋಮವಾರ ನೂತನ ಸಚಿವರಿಗೆ ಖಾತೆ ಹಂಚಿಕೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಫೆಬ್ರವರಿ 08, 2020 (www.justkannada.in): ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

ಖಾತೆ ಹಂಚಿಕೆಯ ಪಟ್ಟಿಯನ್ನು ಸಿದ್ಧ ಪಡಿಸಿದ್ದೇನೆ. ಈ ಸಂಬಂಧ ದೆಹಲಿಗೆ ತೆರಳುವುದಿಲ್ಲ ಎಂದು ಬಿಎಸ್ವೈ ತಿಳಿಸಿದ್ಧಾರೆ.  ಸಚಿವರಿಗೆ ಅಂದೇ ಖಾತೆ ಹಂಚಿಕೆ ಮಾಡಿರಲಿಲ್ಲ. ಇದಕ್ಕೆ ಕಾರಣ ಖಾತೆ ಹಂಚಿಕೆಯಲ್ಲಿ ಗೊಂದಲ ಇದೆ ಎನ್ನಲಾಗಿತ್ತು.

ಇಂದು ಮತ್ತೆ ಖಾತೆ ಹಂಚಿಕೆ ಬಗ್ಗೆ ಸ್ಪಷ್ಟ ಪಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸೋಮವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ. ದೆಹಲಿಗೆ ತೆರಳುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಸೋಮವಾರ ಮುಹೂರ್ತ ಫಿಕ್ಸ್ ಮಾಡಿದ್ದಾರೆ.