ಮಕ್ಕಳಲ್ಲಿ ಕನ್ನಡ ಕಲಿಯುವ ಆಸಕ್ತಿಯಿದ್ದರೂ ಹಿಂದಿ, ಸಂಸ್ಕೃತ ಕಲಿಯಲು ಪ್ರೋತ್ಸಾಹಿಸುತ್ತಿರುವುದು ಕ್ರಮವಲ್ಲ- ಟಿ.ಎಸ್.ನಾಗಾಭರಣ ತಾಕೀತು…

ಬೆಂಗಳೂರು,ನವೆಂಬರ್,18,2020(www.justkannada.in): ಕರ್ನಾಟಕದಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ. ವಿದ್ಯಾಲಯಕ್ಕೆ ಸೇರುವ ಮಕ್ಕಳಲ್ಲಿ ಕನ್ನಡ ಕಲಿಯುವ ಆಸಕ್ತಿಯಿದ್ದರೂ ಬಲವಂತವಾಗಿ ಹಿಂದಿ, ಸಂಸ್ಕೃತ ಕಲಿಯಲು ಪ್ರೋತ್ಸಾಹಿಸುತ್ತಿರುವುದು ಸರಿಯಾದ ಕ್ರಮವಲ್ಲ. ಇನ್ನು ಮುಂದೆ ಹೀಗಾಗದಂತೆ ಎಚ್ಚರವಹಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಕೇಂದ್ರೀಯ ವಿದ್ಯಾಲಯ ಸಂಘಟನೆಗೆ ತಾಕೀತು ಮಾಡಿದರು.children-interest-kannada-encouraging-hindi-sanskrit-not-norm-ts-nagabharana

ಆಡಳಿತದಲ್ಲಿನ ಸಂಪೂರ್ಣ ಕನ್ನಡ ಅನುಷ್ಠಾನ ಕುರಿತು ವಿಧಾನಸೌಧದಲ್ಲಿಂದು ಕೇಂದ್ರೀಯ ವಿದ್ಯಾಲಯ ಸಂಘಟನೆಯೊಂದಿಗೆ ಜಾಲ ಸಂಪರ್ಕ ಸಭೆ ನಡೆಸಿದ  ಟಿ.ಎಸ್ ನಾಗಾಭರಣ, ಕರ್ನಾಟಕದಲ್ಲಿರುವ ವಿದ್ಯಾಸಂಸ್ಥೆಯೊಂದು ಕನ್ನಡವನ್ನು ಕಡೆಗಣಿಸುವುದು ಸರಿಯಲ್ಲ. ಕೇಂದ್ರೀಯ ವಿದ್ಯಾಲಯವು ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಶೈಕ್ಷಣಿಕ ಸಂಸ್ಥೆಗಳು 2015ರ ಕನ್ನಡ ಭಾಷಾ ಕಲಿಕಾ ಅಧಿನಿಯಮದನ್ವಯ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕಿರುವುದು ನಿಮ್ಮ ಜವಾಬ್ದಾರಿಯಾಗಿದ್ದು, ಕೂಡಲೇ ಕನ್ನಡವನ್ನು ದ್ವಿತೀಯ ಭಾಷೆಯಾಗಿ ಬೋಧಿಸುವಂತೆ ಅಧ್ಯಕ್ಷರು ಸೂಚಿಸಿದರು.

ಪ್ರಾಧಿಕಾರ ನಡೆಸುವ ಮುಖ್ಯವಾದ ಕನ್ನಡ ಅನುಷ್ಠಾನ ಪರಿಶೀಲನಾ ಸಭೆಗೆ ಮುಖ್ಯವಾಗಿ ಆಯುಕ್ತರು ಪಾಲ್ಗೊಂಡು ಕನ್ನಡದ ಅನುಷ್ಠಾನ, ನೇಮಕಾತಿ ಇತ್ಯಾದಿಗಳ ಬಗ್ಗೆ ಚರ್ಚಿತವಾಗುವ ವಿಷಯಗಳ ಅನುಪಾಲನೆ ಮಾಡುವಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದು ಅವರ ಗುರುತರ ಜವಾಬ್ದಾರಿಯೂ ಆಗಿತ್ತು. ಅವರ ಅನುಪಸ್ಥಿತಿಯ ಬಗ್ಗೆ ಸೂಕ್ತ ಮಾಹಿತಿಯನ್ನು ಪ್ರಾಧಿಕಾರಕ್ಕೆ ತಿಳಿಸುವಂತೆ ಹೇಳಿದರು.children-interest-kannada-encouraging-hindi-sanskrit-not-norm-ts-nagabharana

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ, ಕೇಂದ್ರೀಯ ವಿದ್ಯಾಲಯ ಸಂಘಟನೆಯ  ಉಪ ಆಯುಕ್ತರಾದ ಡಾ.ಎನ್.ವಸಂತ್, ಅಧ್ಯಕ್ಷರ ಅಪ್ತ ಕಾರ್ಯದರ್ಶಿ ಡಾ.ವೀರಶೆಟ್ಟಿ ಇತರರು ಉಪಸ್ಥಿರರಿದ್ದರು.

Key words: children – interest – Kannada-encouraging – Hindi – Sanskrit -not – norm- TS Nagabharana.