ಕನಕಪುರದ ನೆಲಗುಳಿಯ ಧ್ರುವ ಸರ್ಜಾ ಫಾರ್ಮ್ ಹೌಸ್​ನಲ್ಲಿ ಚಿರಂಜೀವಿ ಅಂತ್ಯಕ್ರಿಯೆ

ಬೆಂಗಳೂರು, ಜೂನ್ 08, 2020 (www.justkannada.in): ಇಂದು ಕನಕಪುರದ ನೆಲಗುಳಿ ಬಳಿ ಇರುವ ಧ್ರುವ ಸರ್ಜಾ ಫಾರ್ಮ್ ಹೌಸ್​ನಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.

ಹೃದಯಾಘಾತದಿಂದ ನಿನ್ನೆ ನಿಧನರಾದ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆಗೆ ಸಿದ್ಧತೆಗಳೂ ನಡೆಯುತ್ತಿವೆ. ಅಂದಹಾಗೆ ನೆಲಗುಳಿ ಫಾರ್ಮ್ ಹೌಸ್ ಚಿರುಗೆ ನೆಚ್ಚಿನ ಸ್ಥಳವಾಗಿತ್ತು.

ಶೂಟಿಂಗ್ ಇಲ್ಲದ ವೇಳೆ ತಮ್ಮನ ಫಾರ್ಮ್ ಹೌಸ್​​ನಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದರು. ಹಾಗಾಗಿ ಅಣ್ಣನ ನೆಚ್ಚಿನ ಜಾಗದಲ್ಲೇ ಅಂತ್ಯಕ್ರಿಯೆ ಮಾಡಲು ಸಹೋದರ ಧ್ರುವ ಸರ್ಜಾ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಚಿರಂಜೀವಿ ಸರ್ಜಾ ಅವರ ಪಾರ್ಥಿವ ಶರೀರವನ್ನು ಕೆ.ಆರ್. ರಸ್ತೆಯ ನಿವಾಸದಲ್ಲಿ ಅಭಿಮಾನಿಗಳ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.