ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ: ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಮೇ,11,2023(www.justkannada.in): ಎಕ್ಸಿಟ್ ಪೋಲ್ ಏನಾದರೂ ಹೇಳಲಿ . ಎಲ್ಲವೂ ಮತ ಎಣಿಕೆ ಬಳಿಕ ತಿಳಿದು ಬರಲಿದೆ. ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ  ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ, ಕರ್ನಾಟಕದಲ್ಲಿ ಮತ್ತೆ ನಾವೇ ಸರ್ಕಾರ ರಚನೆ ಮಾಡುತ್ತೇವೆ . ಕಾಂಗ್ರೆಸ್​​ ಗಿಂತ ಹೆಚ್ಚು ಸ್ಥಾನ ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ. ಸಮೀಕ್ಷೆ ಏನೇ ಹೇಳಿದರೂ ಮತ ಎಣಿಕೆ ನಂತರ ಗೊತ್ತಾಗಲಿದೆ. ನಮಗೆ ಸ್ಪಷ್ಟವಾದ ಬಹುಮತ ಸಿಗಲಿದೆ. ಈ ಚುನಾವಣೆಯಲ್ಲಿ ಬಿಜೆಪಿಗೆ 115ಕ್ಕೂ ಹೆಚ್ಚು ಸ್ಥಾನ ಸಿಗಲಿದೆ ಎಂದರು.

ವೀರಶೈವ ಲಿಂಗಾಯತ ಮತಗಳ ವಿಭಜನೆ ಆಗಿಲ್ಲ. ನಾನೇ ಸ್ವಂತ ನಿರ್ಧಾರದಿಂದ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದೇನೆ. ಇದನ್ನು ಸಮುದಾಯ ಅರ್ಥ ಮಾಡಿಕೊಂಡಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆಯಾಗಲಿದ್ದು ಈ ಎಲ್ಲಾ ಬಗ್ಗೆ ಹೈಕಮಾಂಡ್​ ನಿರ್ಧಾರ ಮಾಡಲಿದೆ ಎಂದು ಬಿಎಸ್ ವೈ ತಿಳಿಸಿದರು.

Key words: Clear -majority – BJP – state – Former CM -BS Yeddyurappa