ಮೋದಿ ಅವರಿಗೆ 75 ವರ್ಷ ಆದ ಬಳಿಕ ಸಿಎಂ ಬೊಮ್ಮಾಯಿಗೆ ಪ್ರಧಾನಿಯಾಗುವ ಅವಕಾಶವಿದೆ- ಲೇವಡಿ ಮಾಡಿದ ಲಕ್ಷ್ಮಣ್ ಸವದಿ.

kannada t-shirts

ಅಥಣಿ,ಏಪ್ರಿಲ್,12,2023(www.justkannada.in): ರಾಜ್ಯ ವಿಧಾನಸಭೆ ಚುನಾವಣೆಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆಯಲು ಮುಂದಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಲಕ್ಷ್ಮಣ್ ಸವದಿ, ಸಿಎಂ ಬೊಮ್ಮಾಯಿ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಮುಂದಿನ ದಿನಗಳಲ್ಲಿ ಸಿಎಂ ಬೊಮ್ಮಾಯಿಗೆ ಪ್ರಧಾನಿಯಾಗುವ ಅವಕಾಶವಿದೆ. ಸಿಎಂ ಬೊಮ್ಮಾಯಿರನ್ನ ಪ್ರಧಾನಿಯಾಗಿ ನೋಡುವ ಆಸೆ ಇದೆ. ಪ್ರಧಾನಿ ಆಗಲು ಯಾರೂ ತಪ್ಪಿಸಲ್ಲ ಅಂದುಕೊಂಡಿದ್ದೇನೆ.  ಮೋದಿ ಅವರಿಗೆ 75 ವರ್ಷ ಆದ ಬಳಿಕ ಸಿಎಂ ಬೊಮ್ಮಾಯಿಗೆ ಅವಕಾಶ ಸಿಗಬಹುದು ಎಂದು ವ್ಯಂಗ್ಯವಾಡಿದರು.

ಸಿಎಂ ಬೊಮ್ಮಾಯಿ ಕಾಂಗ್ರೆಸ್ ಸೇರಲು ಮುಂಧಾಗಿದ್ದರು. ಆ ವೇಳೆ ನಾನು ಮತ್ತು ಸಿಸಿ ಪಾಟೀಲ್ ಬಿಜೆಪಿಗೆ ಸೇರಿಸಿದವು.  ನಮ್ಮಿಂದಾಗಿ ಅವರು ಬಿಜೆಪಿ ಸೇರಿ ಸಿಎಂ ಆದರು ಎಂದು ಲಕ್ಷ್ಮಣ್ ಸವದಿ ಹೇಳಿದರು.

ಇದೇ ವೇಳೆ ರಮೇಶ್ ಜಾರಕಿಹೊಳಿ ವಿರುದ್ದವೂ ಕಿಡಿಕಾರಿದ ಲಕ್ಷ್ಮಣ್ ಸವದಿ, ರಾಜ್ಯದಲ್ಲಿ ಗೆಲ್ಲಿಸುವ ತಾಕತ್ತು ಇರೋದು ರಮೇಶಣ್ಣನಿಗೆ ಮಾತ್ರ. ಅವರು ಸಾಹುಕಾರರು. ಬಲಾಢ್ಯರು ಎಂದು ಟಾಂಗ್ ಕೊಟ್ಟರು.

Key words: CM Bommai – chance – become – Prime Minister-Laxman Savadi

website developers in mysore