ದ್ರೌಪದಿ ಮುರ್ಮು ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ ಸಿಎಂ ಬೊಮ್ಮಾಯಿ.

 

ನವದೆಹಲಿ,ಜೂನ್,24,2022(www.justkannada.in): ಜುಲೈ 18 ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದ್ದು ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದ್ರೌಪದಿ ಮುರ್ಮು ಅವರ ನಾಮಪತ್ರಕ್ಕೆ ಸೂಚಕರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸಹಿ ಹಾಕಿದರು.

ದೆಹಲಿಯ ಕರ್ನಾಟಕ ಭವನದಿಂದ ಸಂಸತ್ ಭವನಕ್ಕೆ ತೆರಳಿದ ಸಿಎಂ ಬೊಮ್ಮಾಯಿ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ್ದಾರೆ. ಸಚಿವ ಬಿ ಶ್ರೀರಾಮುಲು,  ಸಂಸದರಾದ ಶಿವಕುಮಾರ ಉದಾಸಿ, ಉಮೇಶ ಜಾದವ್ , ಶಾಸಕ ರಾಜುಗೌಡ ಉಪಸ್ಥಿತರಿದ್ದರು.

ದ್ರೌಪದಿ ಮುರ್ಮು ಅವರು ಎನ್ ಡಿಎ ಅಭ್ಯರ್ಥಿಯಾಗಿ ರಾಷ್ಟ್ರಪತಿ ಹುದ್ದೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಇಂದು ವಾಪಸ್‌ ಆಗಲಿದ್ದಾರೆ.

Key words: CM Bommai – signatory –president-election- Draupadi Murmu- nomination.