ಡಿ.ಕೆ ಶಿವಕುಮಾರ್ ಗೆ ಸಿಎಂ ಬಿಎಸ್ ವೈ ಕರೆ: ಶೀಘ್ರ ಗುಣಮುಖರಾಗುವಂತೆ ಹಾರೈಕೆ…

ಬೆಂಗಳೂರು,ಆ,26,2020(www.justkannada.in):  ಕೊರೋನಾ ಸೋಂಕಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ  ಸಿಎಂ ಬಿಎಸ್ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.jk-logo-justkannada-logo

ಡಿ.ಕೆ ಶಿವಕುಮಾರ್ ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಶೀಘ್ರ ಗುಣಮುಖರಾಗಿ, ಚೇತರಿಸಿಕೊಂಡು ವಾಪಸ್ ಬನ್ನಿ ಎಂದು ಹೇಳಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಡಿ.ಕೆ ಶಿವಕುಮಾರ್ ಕೋವಿಡ್ ಟೆಸ್ಟ್ ಮಾಡಿಸಿದ್ದರು. ನಿನ್ನೆ ವರದಿ ಬಂದ ಬಳಿಕ ಕೋರೋನಾ ಸೋಂಕಿರುವುದು ಪತ್ತೆಯಾಗಿತ್ತು. ಈ ಬೆನ್ನಲ್ಲೆ ಡಿ.ಕೆ ಶಿವಕುಮಾರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.cm-bs-yeddyurappa-call-dk-sivakumar-speedy-recovery

Key words: CM BS Yeddyurappa- call -DK Sivakumar-speedy -recovery.