ನೆರೆ ಪ್ರದೇಶಗಳಿಗೆ ಭೇಟಿ ನೀಡಲು ಮೈಸೂರಿಗೆ ಬಂದಿಳಿದ ಸಿಎಂ ಬಿಎಸ್ ಯಡಿಯೂರಪ್ಪ

 

ಮೈಸೂರು,ಆ,12,2019(www.justkannada.in): ರಾಜ್ಯದ 17  ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನಲೆ.ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ  ಬಿಎಸ್ ಯಡಿಯೂರಪ್ಪ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ಮೈಸೂರಿನಲ್ಲೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ನೀಡಲಿದ್ದಾರೆ.

ಮೈಸೂರಿನಲ್ಲಿಯೂ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಸಿಎಂ ಬಿಎಸ್ ವೈ  ಮೈಸೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ. ಜಿಲ್ಲೆಯ ನಂಜನಗೂಡು ಭಾಗದಲ್ಲಿ ಪ್ರವಾಸ ಮಾಡಲಿದ್ದು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಸಿಎಂ ಆಗಿ ಮೊದಲ ಬಾರಿಗೆ ಮೈಸೂರಿಗೆ ಬಿಎಸ್ ಯಡಿಯೂರಪ್ಪಗೆ  ಗಾಡ್ ಆನರ್ ಮೂಲಕ ಮೈಸೂರು ಪೋಲಿಸರು ಸ್ವಾಗತಿಸಿದರು.

Key words: CM BS Yeddyurappa – came – Mysore – visit – neighboring areas