ಖಾತೆ ಹಂಚಿಕೆ ಮತ್ತು ಬದಲಾವಣೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು ಹೀಗೆ…

ಬೆಂಗಳೂರು,ಜನವರಿ,15,2021(www.justkannada.in):  ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಬರ್ತಾರೆ.  ಅಮಿತ್ ಶಾ ಬಂದು ಹೋದ ಬಳಿಕ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು  ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.jk-logo-justkannada-mysore

ಇಂದು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ,  ನಾಳೆ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ. ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.  ಅವರು ಬಂದು ಹೋದ ಬಳಿಕ ಖಾತೆ ಹಂಚಿಕೆ ಮಾಡುತ್ತೇವೆ. ಅಥವಾ ಅದಕ್ಕೂ ಮುನ್ನ ಖಾತೆ ಹಂಚಿಕೆ ಮಾಡಬಹುದು ಎಂದರು.CM BS Yeddyurappa- clarified –department-allocation - change –new minister

ಇನ್ನು ನೂತನ ಸಚಿವರಿಗೆ ಖಾತೆ ಹಂಚಿಕೆ,  ಖಾತೆ ಬದಲಾವಣೆ,  ಖಾತೆ ಅದಲು ಬದಲು ಮಾಡುವುದು. ಸೇರಿ ಹಲವು ವಿಚಾರಗಳ ಬಗ್ಗೆ ಪಕ್ಷದ ಹಿರಿಯರ ಜತೆ ಚರ್ಚೆ ನಡೆಸಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: CM BS Yeddyurappa- clarified –department-allocation – change –new minister