ಸಿಎಂ ಬಿಎಸ್ ವೈ ಭೇಟಿಯಾದ ಸಚಿವ ಹೆಚ್ . ನಾಗೇಶ್…

ಬೆಂಗಳೂರು,ಜನವರಿ,12,2021(www.justkannada.in): ರಾಜ್ಯ ಸಚಿವ ಸಂಪುಟ ಪುನರಚನೆ ಅಥವಾ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು  ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ಮಾಡುವುದು ನಿಶ್ಚಿತ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.jk-logo-justkannada-mysore

ಈ ಮಧ್ಯೆ ಸಂಪುಟ ವಿಸ್ತರಣೆ ವೇಳೆ ಕೆಲವರಿಗೆ ಕೋಕ್ ನೀಡುವ ಸಾಧ್ಯತೆ  ಇದೆ.  ಸಚಿವ ಹೆಚ್.ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡುವ ವದಂತಿ ಹಬ್ಬಿದ ಹಿನ್ನೆಲೆ ಸಚಿವ ಹೆಚ್. ನಾಗೇಶ್ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿದ್ದಾರೆ.

CM- BS Yeddyurappa- Minister- H. Nagesh.
ಕೃಪೆ-INTERNET

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ  ಸಚಿವ ಹೆಚ್ ನಾಗೇಶ್ ಭೇಟಿಯಾಗಿದ್ದು ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇನ್ನು ಇದೇ ವೇಳೆ ಶಾಸಕ ಅರವಿಂದ ಬೆಲ್ಲದ್ ಸಹ ಸಿಎಂ ಬಿಎಸ್ ವೈ ಅವರನ್ನ ಭೇಟಿಯಾಗಿದ್ದಾರೆ ಎನ್ನಲಾಗಿದೆ.

Key words. CM- BS Yeddyurappa- Minister- H. Nagesh.