ಹೆಚ್.ವಿಶ್ವನಾಥ್ ಆರೋಪದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ.

kannada t-shirts

ಬೆಂಗಳೂರು,ಜೂನ್,18,2021(www.justkannada.in): ನೀರಾವರಿ ಇಲಾಖೆಯಲ್ಲಿ 20 ಸಾವಿರ ಕೋಟಿ ರೂ. ಟೆಂಡರ್ ಅಕ್ರಮ ನಡೆದಿದೆ ಎಂದು ತಮ್ಮದೇ ಪಕ್ಷದ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮಾಡಿರುವ ಆರೋಪದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.jk

ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ನೀರಾವರಿ ಇಲಾಖೆಯಲ್ಲಿ ಯಾವುದೇ ಹಗರಣ ನಡೆದಿಲ್ಲ. ಹೆಚ್.ವಿಶ್ವನಾಥ್ ಆರೋ ಆಧಾರ ರಹಿತ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಯಾರೋ ಒಂದಿಬ್ಬರು ಮಾತನಾಡಬಹುದು.  ಅವರಿಗೆ ಏನಾದರೂ ಸಮಸ್ಯೆ ಇದ್ದರೇ ಬಂದು ಬಗೆಹರಿಸಿಕೊಳ್ಳಲಿ . ಹೆಚ್.ವಿಶ್ವನಾಥ್ ಬಗ್ಗೆ ನಾನು ಏನು ಮಾತನಾಡಲ್ಲ. ಅವರ ವಿರುದ್ಧ ಕ್ರಮದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

ಎಲ್ಲಾ ಇಲಾಖೆಗಳಲ್ಲಿ ವಿಜಯೇಂದ್ರ ಹಸ್ತಕ್ಷೇಪ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ವಿಜುಯೇಂದ್ರ ವಿರುದ್ದದ ಆರೋಪ ಆಧಾರ ರಹಿತವಾದದ್ದು ಎಂದರು.

Key words: CM BS Yeddyurappa –MLC- H.Vishwanath’s- allegations.

website developers in mysore