ಉಪಚುನಾವಣಾ ಫಲಿತಾಂಶಕ್ಕೂ ಮುನ್ನ ದೇವರ ಮೊರೆ ಹೋಗಲಿರುವ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಡಿ,5,2019(www.justkannada.in):  ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿನ ಉಪಚುನಾವಣೆಯ ಮತದಾನ ಇಂದು ನಡೆದಿದ್ದು ಡಿ.9 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಬಿಜೆಪಿ ಸರ್ಕಾರವನ್ನ ಉಳಿಸಿಕೊಳ್ಳಲು ಪಣತೊಟ್ಟಿರುವ ಸಿಎಂ ಬಿಎಸ್ ಯಡಿಯೂರಪ್ಪ ಇದಕ್ಕಾಗಿ ದೇವರ ಮೊರೆ ಹೋಗಲಿದ್ದಾರೆ

ಡಿಸೆಂಬರ್ 9ರಂದು ಫಲಿತಾಂಶ ಹೊರ ಬೀಳಲಿದೆ. ಉಪಚುನಾವಣೆಯ ಫಲಿತಾಂಶಕ್ಕೂ ಮೊದಲೇ ಸಿಎಂ ಬಿಎಸ್ ವೈ ಧರ್ಮಸ್ಥಳದ ಮಂಜುನಾಥನ ಮೊರೆ ಹೋಗಲಿದ್ದಾರೆ   ಡಿಸೆಂಬರ್ 8 ರಂದು ಸಿಎಂ ಯಡಿಯೂರಪ್ಪ ಧರ್ಮಸ್ಥಳಕ್ಕೆ ತೆರಳಿ  ಸರ್ಕಾರದ ಉಳುವಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಧರ್ಮಸ್ಥಳದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸರ್ಕಾರ ಉಳಿಸಲು 15 ಕ್ಷೇತ್ರಗಳ ಪೈಕಿ ಬಿಜೆಪಿ 7  ಕ್ಷೇತ್ರಗಳಲ್ಲಿ ಗೆಲ್ಲಲೇಬೇಕಾಗಿದೆ,

Key words: CM BS Yeddyurappa –will –visit-darmasthala-decmber 8 –byelection