ಸಿಎಂ ಬದಲಾವಣೆ ವಿಚಾರ- ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…?

 

ದೆಹಲಿ.ಜುಲೈ.20.2021(www.justkannada.in) ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ವಿಚಾರದ ಬಗ್ಗೆ ಯಾವುದೇ ರೀತಿಯ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.jk

ದೆಹಲಿಯಲ್ಲಿ ಮಾಧ್ಯಮದ ಜೂತೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ಕಾಂಗ್ರೆಸಿಗೆ ಯಾವುದೇ ಲಾಭ ಹಾಗೂ ನಷ್ಟವಾಗುವುದಿಲ್ಲ. ಇದರ ಬಗ್ಗೆ ಮಾತನಾಡಿದರೆ ರಾಜ್ಯದ ಮಾನ ಹೋಗುತ್ತದೆ ಎಂದರು.

ಎಂ.ಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಅವರು ವೈಯಕ್ತಿಕ ಹೇಳಿಕೆಯನ್ನು ನೀಡಿದ್ದಾರೆ. ಇವರ ಹೇಳಿಕೆಗೂ ಕಾಂಗ್ರೆಸಿಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

Key words: CM –Change-Issue- DK Shivakumar -responded