ಸಿಎಂ ಬದಲಾವಣೆ ಬಹುತೇಕ ಖಚಿತ: ನಾನು ಇದೇ ಖಾತೆಯಲ್ಲಿ ಮುಂದುವರೆಯಲು ಇಷ್ಟ ಎಂದ ಸಚಿವ ಕೆ.ಎಸ್ ಈಶ್ವರಪ್ಪ.

ದಾವಣಗೆರೆ,ಜುಲೈ,23,2021(www.justkannada.in): ರಾಜೀನಾಮೆ ಬಗ್ಗೆ  ಸಿಎಂ ಬಿಎಸ್ ಯಡಿಯೂರಪ್ಪ ಈಗಾಗಲೇ ಸುಳಿವು ನೀಡಿದ್ದು ಜುಲೈ 25ರಂದು ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಬದಲಾವಣೆ ಬಹುತೇಕ ಖಚಿತ ಎಂದು ತಿಳಿಸಿದ್ದಾರೆ.jk

ದಾವಣಗೆರೆಯಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಕೆ.ಎಸ್ ಈಶ್ವರಪ್ಪ, ನಾಯಕತ್ವ ಬದಲಾವಣೆ ಬಹುತೇಕ ಖಚಿತ. ಆದರೆ ಇನ್ನು ಏನೇನು ಬದಲಾವಣೆಯಾಗುತ್ತದೆ ಎಂಬುದು ಗೊತ್ತಿಲ್ಲ. ನಾನು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವನಾಗಿರಲು ಇಷ್ಟ. ನಾನು ಇದೇ ಖಾತೆಯಲ್ಲಿ ಮುಂದುವರೆಯಬೇಕೆಂಬ ಆಸೆ ಇದೆ ಎಂದರು.vinay-kulkarni-cbi-custody-minister-ks-eshwarappa

ಇನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್ ಸೇರಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ತೀರ್ಮಾನ ಮಾಡುತ್ತಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

Key words: CM -change – Minister- KS Eshwarappa -davanagere