ವಿಕಲಚೇತನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡಿದ  ಸಿಎಂ ಹೆಚ್. ಡಿ ಕುಮಾರಸ್ವಾಮಿ…

ಬೀದರ ಜೂನ್ 27,2019(www.justkannada.in):  ಸಿಎಂ ಹ  ಎಚ್ ಡಿ ಕುಮಾರಸ್ವಾಮಿ ಅವರು  ಇಂದು ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲ್ಲೂಕಿನ ಉಜಳಂಬ ಗ್ರಾಮದಲ್ಲಿ ನಡೆದ ಜನತಾ ದರ್ಶನದಲ್ಲಿ ವಿಕಲಚೇತನರು ಹಾಗೂ ಪೋಷಕರ ಅಹವಾಲುಗಳನ್ನು ಆಲಿಸಿದರು.

ವಿಕಲಚೇತನ ಸಹೋದರನೊಂದಿಗೆ ಆಗಮಿಸಿದ ವಿದ್ಯಾರ್ಥಿನಿಯೊಬ್ಬಳು ತನ್ನ ತಮ್ಮನ ಆರೋಗ್ಯಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಬೇಕು. ನಾನು ಪಿಯುಸಿನಲ್ಲಿ ಶೇ. 94ರಷ್ಟು ಅಂಕಪಡೆದು ತೇರ್ಗಡೆಯಾಗಿದ್ದು, ಕೃಷಿ ಪದವಿಯಲ್ಲಿ ಅಧ್ಯಯನ ಮಾಡಲು ಅವಕಾಶ ನೀಡಿ ಎಂದು ಕೋರಿದಳು. ಸೋದರ ಸೋದರಿಯರ ಸಂಕಷ್ಟಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಿಎಸ್ ಸಿ ಪದವಿ ಓದಿಸಲು ಅಗತ್ಯ ನೆರವು ನೀಡುವುದಾಗಿ ಸ್ಥಳದಲ್ಲೇ ಪರಿಹಾರ ಸೂಚಿಸಿದರು.‌ ಜೊತೆಗೆ ಅವರಿಗೆ ಎರಡು ಲಕ್ಷ ರೂ ಬಿಡುಗಡೆ ಮಾಡಿದರು.

ಊರುಗೋಲು ಹಿಡಿದುಕೊಂಡು ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಬಳಿ ‌ಬಂದ ಕೆಲವು ವಿಕಲಚೇತನರಿಗೆ ವಿಕಲಚೇತನರ ಇಲಾಖೆಯ ಮೂಲಕ ಊರುಗೋಲು ಕೊಡಿಸುವುದಾಗಿ ಸಿಎಂ  ತಿಳಿಸಿದರು.

ಚಿಕಿತ್ಸೆಗೆ ಸೂಚನೆ : ಕಿಡ್ನಿ ವೈಫಲ್ಯ, ಹೃದಯ ಕಾಯಿಲೆ ಇರುವವರ ಅಹವಾಲು ಆಲಿಸಿದ ಮುಖ್ಯಮಂತ್ರಿಯವರು, ಜಯದೇವ ಮತ್ತು ನೆಪ್ರೋ ಯುರಾಲಜಿ ಇನಸ್ಟಿಟ್ಯೂಟ್ ಗಳ ನಿರ್ದೇಶಕರಿಗೆ  ದೂರವಾಣಿ ಮೂಲಕ ಮಾತನಾಡಿ ಅಗತ್ಯ ಚಿಕಿತ್ಸೆ ಕೊಡಲು ಸೂಚಿಸಿದರು. ಆರು ಜನರಿಗೆ ಅಂಗವಿಕಲರ ಪರಿಹಾರ ನಿಧಿಯಲ್ಲಿ ಪರಿಹಾರ ಘೋಷಣೆ ಮಾಡಿದರು.

Key words: CM H. D Kumaraswamy- gramavastavya- bidar- solution