ತುಂಬು ಗರ್ಭಿಣಿಯಾಗಿದ್ರೂ ಕೊರೊನಾ ಕಾರ್ಯ ನಿರ್ವಹಿಸುತ್ತಿದ್ದ ನರ್ಸ್’ಗೆ ಕರೆ ಮಾಡಿ ಮಾತನಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು, ಮೇ 10, 2020 (www.justkannada.in):  9 ತಿಂಗಳು ತುಂಬು ಗರ್ಭಿಣಿ ಯಾಗಿದ್ದರು ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿ ಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿರುವ ಶ್ರೀ ರೂಪ ಅವರಿಗೆ ಮಾನ್ಯ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.‌

ಇದರ ಜೊತೆಗೆ ಕೂಡಲೇ ರಜೆ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚನೆ ನೀಡಿದರು.  ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪಯಣಿಸಿ ಸೇವೆ ಮಾಡುತ್ತಿದ್ದಾರೆ.

9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೋನಾ ವಾರಿಯರ್ಸ್ ಏನು   ಅನ್ನುವುದನ್ನು ತೋರಿಸಿಕೊಟ್ಟಿದ್ದಾರೆ.