ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲ್ : ಟ್ವೀಟರ್ ನಲ್ಲಿ ಕಾಂಗ್ರೆಸ್ ಲೇವಡಿ

ಬೆಂಗಳೂರು,ನವೆಂಬರ್,01,2020(www.justkannada.in) : ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ..? ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ, ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲ್ ಸಾಕ್ಷಿಎಂದು ಕರ್ನಾಟಕ ಕಾಂಗ್ರೆಸ್ ಟ್ವಿಟರ್ ನಲ್ಲಿ ಲೇವಡಿ ಮಾಡಿದೆ.

jk-logo-justkannada-logo

ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯನವರದ್ದು ನಾಯಿಪಾಡುಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆಇದರ ವಿರುದ್ಧ ಕಾಂಗ್ರೆಸ್ ಅಕ್ರೋಶಗೊಂಡಿದ್ದು ಕರ್ನಾಟಕ ಕಾಂಗ್ರೆಸ್ ಟ್ವಿಟರ್ ಅಕೌಂಟ್ನಿಂದ ಸರಣಿ ಟ್ವೀಟ್ಗಳನ್ನು ಮಾಡಿದೆ. ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಸಹ ಟ್ವೀಟ್ನಲ್ಲಿ ಉಲ್ಲೇಖಿಸಿದೆ.

 

ಕಟೀಲ್ ಅವರ ಮಾತಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲ

ನಳಿನ್ ಕುಮಾರ್ ಕಟೀಲ್ ಅವರ ಮಾತಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲಎಂದು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ. ಪದೇ, ಪದೇ ಅವಹೇಳನ ಮಾಡುತ್ತಿರುವ ಬಸವನಗೌಡ ಪಾಟೀಲ್ ಯತ್ನಾಳ್ ರಿಗೆ ಕನಿಷ್ಠ ನೋಟಿಸ್ ನ್ನು ಕೊಡಲಾಗಿಲ್ಲ. ಪ್ರಧಾನಿ ಭೇಟಿಗೆ ಮುಖ್ಯಮಂತ್ರಿಗೆ ಅವಕಾಶ ಕಲ್ಪಿಸಿಲ್ಲ. ಯಡಿಯೂರಪ್ಪ ಬಿಜೆಪಿಯಲ್ಲಿ ಯಾವ ಪಾಡಿನಲ್ಲಿದ್ದಾರೆ ಎಂಬುದನ್ನು ತಿಳಿಸುತ್ತದೆ. ಪಕ್ಷ ಕಟ್ಟಿದ ಯಡಿಯೂರಪ್ಪ ಅವರನ್ನು ಚನ್ನಾಗಿ ನೋಡಿಕೊಳ್ಳಿ ಎಂದು ಟೀಕಿಸಿದೆ.

Comedy,Actor,Nalin,Kumar,Kateel,Congress,tweeted,Twitter

ಬಿಜೆಪಿ ಮಾನ ಹರಾಜು ಹಾಕಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು

ಬಿಜೆಪಿ ಮಾನ ಹರಾಜು ಹಾಕಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು. ಅವರು ಇದೇ ರೀತಿ ಮಾತನಾಡುತ್ತಾ ಬಿಜೆಪಿಯ ಬಣ್ಣ ಬಯಲು ಮಾಡುತ್ತಲೆ ಇರಲಿ ಎಂದು ಟ್ವೀಟ್ ಮಾಡಲಾಗಿದೆ.

Comedy-Actor-Nalin-Kumar-Kateel-Congress-tweeted-Twitter

key words : Comedy-Actor-Nalin-Kumar-Kateel-Congress-tweeted-Twitter