ಮಂತ್ರಿಗಿರಿಗಾಗಿ ಕೊನೆ ಸರ್ಕಸ್: ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಕಮಲ ನಾಯಕರ ಗೌಪ್ಯಸಭೆ?

ಬೆಂಗಳೂರು, ಜನವರಿ 23, 2022 (www.justkannada.in):  ಸಚಿವ ಸಂಪುಟ ಪುನಾರಚನೆ ಖಚಿತವಾಗದಿದ್ದರೂ ರಾಜ್ಯದಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಗೌಪ್ಯಸಭೆ ನಡೆದಿದೆ ಎನ್ನಲಾಗಿದ್ದು, ಬಿಜೆಪಿಯಲ್ಲಿ ಒಳ ರಾಜಕೀಯ ಶುರುವಾಗಿದೆ.

ಹೌದು. ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಗರಿ ಗೆದರಿವೆ. ಸಚಿವ ಸ್ಥಾನದ ಆಕಾಂಕ್ಷಿಗಳು ಈ ಬಾರಿಯಾದರೂ ಮಂತ್ರಿಗಿರಿ ಗಿಟ್ಟಿಸಲೇಬೇಕೆಂದು ಹಠ ತೊಟ್ಟಿದ್ದು, ಇದಕ್ಕಾಗಿ ತಯಾರಿ ಆರಂಭಿಸಿದ್ದಾರೆ.

ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ವಿವಿಧ ನಾಯಕರ ಗೌಪ್ಯ ಸಭೆ ನಡೆಸಲಾಗಿದೆ ಎನ್ನಲಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾದ ಕಮಲ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

key words: confidential meeting of the karnataka bjp leaders for minister post