‘ಕೈ’ ನಾಯಕಿ ಪ್ರಿಯಾಂಕಾ ಗಾಂಧಿ ಬೆಂಗಾವಲು ವಾಹನ ಅಪಘಾತ…

ಲಕ್ನೋ,ಫೆಬ್ರವರಿ,4,2021(www.justkannada.in):  ಮೃತ ರೈತನ ಕುಟುಂಬಕ್ಕೆ ಸಾಂತ್ವಾನ ಹೇಳಲು ಹೋಗುತ್ತಿದ್ದ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ  ಗಾಂಧಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ.jk

ಉತ್ತರ ಪ್ರದೇಶದ ಹಾಪುರ್ ಬಳಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ಮಧ್ಯೆ ಡಿಕ್ಕಿಯಾಗಿರುವ ಘಟನೆ ನಡೆದಿದೆ ಎನ್ನಲಾಗಿದೆ.

congress-leader-priyanka-gandhi-escorts-vehicle-accident

ಉತ್ತರ ಪ್ರದೇಶದ ರಾಂಪುರಕ್ಕೆ ಪ್ರಿಯಾಂಕಾ ಗಾಂಧಿ ಪ್ರಯಾಣಿಸುತ್ತಿದ್ದರು. ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟ ರೈತನ  ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ರಾಂಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಹಾಪುರ್ ನಲ್ಲಿ ಭದ್ರತಾ ಸಿಬ್ಬಂದಿ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಭದ್ರತಾ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

Key words: congress leader- Priyanka Gandhi -escorts vehicle -accident