ಕಾಂಗ್ರೆಸ್ ಭಯೋತ್ಪಾದಕ ಪಕ್ಷ ಅಂತಾ ಹೆಸರಿಟ್ಟುಕೊಳ್ಳಲಿ- ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ…

kannada t-shirts

ಬೆಂಗಳೂರು,ಡಿ,20,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ ಹಿನ್ನೆಲೆ, ಈ ಕುರಿತು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ, ಕಾಂಗ್ರೆಸ್  ಭಯೋತ್ಪಾದಕ ಪಕ್ಷ ಅಂತಾ ಹೆಸರಿಟ್ಟುಕೊಳ್ಳಲಿ ಎಂದು ಕಿಡಿಕಾರಿದರು.

ಈ ಬಗ್ಗೆ ಇಂದು ಮಾತನಾಡಿದ ಶಾಸಕ ರೇಣುಕಾಚಾರ್ಯ, ಪೌರತ್ವ ಕಾಯ್ದೆ ಬಗ್ಗೆ ಕಾಂಗ್ರೆಸ್ ದಾರಿ ತಪ್ಪಿಸುತ್ತಿದೆ. ಕಾಂಗ್ರೆಸ್ ನವರು ಭಯೋತ್ಪಾದನಾ ಪಕ್ಷ ಅಂತಾ ಹೆಸರಿಟ್ಟುಕೊಳ್ಳಬೇಕು.  ನಿನ್ನೆ ನಡೆದ ಮಂಗಳೂರಿನ ಹಿಂಸಾಚಾರಕ್ಕೆ ಯುಟಿ ಖಾದರ್ ಕಾರಣ. ಯುಟಿ ಖಾದರ್ ಭಯೋತ್ಪಾದಕನ  ರೀತಿ ಮಾತನಾಡಿದ್ದಾರೆ.  ಪ್ರತಿಭಟನೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ನಿನ್ನೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿ ಕಲ್ಲು ತೂರಾಟ ನಡೆದು ಪೊಲೀಸರ ಮೇಲೆಯೇ ಕಲ್ಲುತೂರಾಟವಾಗಿತ್ತು. ನಿಷೇಧದ ನಡುವೆಯೂ ಈ ಘಟನೆ ಸಂಭವಿಸಿದ್ದು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ವೇಳೆ ಇಬ್ಬರು ಸಾವನ್ನಪ್ಪಿದ್ದರು.

Key words: Congress-name – terrorist party- MP Renukacharya

website developers in mysore