ಅವರಪ್ಪನಾಣೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ- ಸಚಿವ ಡಾ.ಕೆ.ಸುಧಾಕರ್.

ಬೆಂಗಳೂರು,ಜುಲೈ,20,2022(www.justkannada.in):  ವಿಧಾನಸಭಾ ಚುನಾವಣೆಗೂ ಮುನ್ನೆವೇ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿಗಾಗಿ ಕಿತ್ತಾಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಅವರಪ್ಪನಾಣೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಮಾತನಾಡಿದ ಸಚಿವ ಸುಧಾಕರ್, ಇನ್ನೂ ಮಗು ಹುಟ್ಟಿಲ್ಲ ಈಗಲೇ ಅಧಿಕಾರಕ್ಕಾಗಿ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ನವರಿಗೆ ಯಾವ ಶಾಸ್ತ್ರದವರು ಹೇಳಿದ್ದಾರೋ ಗೊತ್ತಿಲ್ಲ. ಅವರಪ್ಪನಾಣೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ ಎಂದರು.

Key words: Congress -not come – power -Minister -Dr. K. Sudhakar.