ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ.

ಬೆಳಗಾವಿ,ಜನವರಿ,11,2023(www.justkannada.in): ಕಾಂಗ್ರೆಸ್ ಇಂದಿನಿಂದ ಪ್ರಜಾಧ್ವನಿ ಬಸ್ ಯಾತ್ರೆ ಆರಂಭಿಸಿದ್ದು, ಇಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಯಿತು.

ಬೆಳಗಾವಿಯ ಟಿಳಕವಾಡಿಯ ವೀರಸೌಧದ ಬಳಿ ಬಸ್ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಚಾಲನೆ ನೀಡಿದರು. ಬಳೀಕ ಪ್ರಜಾಧ್ವನಿ ಬಸ್ ಯಾತ್ರೆ ಬೆಳಗಾವಿಯಿಂದ ಚಿಕ್ಕೋಡಿಗೆ ಹೊರಟಿದೆ.  ಇದರಲ್ಲಿ  ಹಿರಿಯ ಕಾಂಗ್ರೆಸ್ ನಾಯಕರು ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆ.

ನಂತರ ಚಿಕ್ಕೋಡಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಸಮಾವೇಶದಲ್ಲಿ  ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಈಗಾಗಲೇ ಬಿಜೆಪಿ ಪಾಪದ ಪುರಾಣ ಎಂಬ ಅಭಿಯಾನ ಶುರು  ಮಾಡಿದೆ.

Key words: Congress- Prajadhwani- bus –yatra- Belgaum