ಕಾಂಗ್ರೆಸ್ ‘ರಾಜಭವನ ಚಲೋ’ ಮತ್ತು ಚನ್ನಪಟ್ಟಣ ಕ್ಷೇತ್ರ ಬಿಡುವ ವಿಚಾರ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ…

ಬೆಂಗಳೂರು,ಜನವರಿ,20,2021(www.justkannada.in):  ದೆಹಲಿ ರೈತರ ಹೋರಾಟ ಬೆಂಬಲಿಸಿ ಇಂದು ರಾಜ್ಯ ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು. ಆದರೆ ಪೊಲೀಸರು ನಗರದ ಮಹಾರಾಣಿ ಕಾಲೇಜು ಬಳಿಯೇ ತಡೆಯೊಡ್ಡಿ ಕಾಂಗ್ರೆಸ್ ನಾಯಕರಾದ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಕಾರ್ಯಕರ್ತರನ್ನ ವಶಕ್ಕೆ ಪಡೆದರು.jk

ಕಾಂಗ್ರೆಸ್ ರಾಜಭವನ ಚಲೋ  ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿರುವ  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರಜಾಪ್ರಭುತ್ವದಲ್ಲಿ ರೈತರ ಪರ ಹೋರಾಟ ಮಾಡಲು ಅವಕಾಶವಿದೆ. ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ. ಸರ್ಕಾರ ಸಹ ಎಲ್ಲರ ಹೋರಾಟಕ್ಕೆ ಬೆಲೆಕೊಡಬೇಕು. ಸರ್ಕಾರ ಸಮಸ್ಯೆ ಸರಿಪಡಿಸುವ ಕ್ರಮವಹಿಸಬೇಕು ಎಂದು ತಿಳಿಸಿದರು.

ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಹೇಳಿಕೆ ನೀಡಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್ ಬಗ್ಗೆ ನಾನು ಮಾತನಾಡಲ್ಲ. ಬೂಟಾಟಿಕೆಗಾಗಿ ರೈತರ ಮನೆಯಲ್ಲಿದ್ದು ಬಂದಿದ್ದಾರೆ. ಹಾಗಾಗಿ ಆ ವೀಕ್ ಮೈಂಡ್ ಬಗ್ಗೆ ಮಾತನಾಡಲಾರೆ ಎಂದರು.

ಇಲಾಖೆಯ ಉಪನಿರ್ದೇಶಕರ ವರ್ಗಾವಣೆಗೂ ಹಣ ಕೇಳುತ್ತಿದ್ದಾರೆ. ಪಾಪ ಅವನು ಎಲ್ಲಿಂದ ಹಣ ತಂದು ಕೊಡ್ತಾನೆ. ಕೊನೆಗೆ ರೈತರಿಂದಲೇ ಹಣ ಪಡೆಯಬೇಕಿದೆ. ಹಾಗಾಗಿ ರೈತರ ಬಗ್ಗೆ ಲಘುವಾಗಿ ಮಾತನಾಡಬಾರದು ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ…

ಚನ್ನಪಟ್ಟಣ ಕ್ಷೇತ್ರ ಬಿಡುವ ವಿಚಾರಕ್ಕೆ ಸ್ಪಷ್ಟನೆ ನೀಡಿದ  ಹೆಚ್‍ ಡಿ ಕುಮಾರಸ್ವಾಮಿ, ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ. ರಾಮನಗರ ಜಿಲ್ಲೆಯನ್ನು ಬಿಟ್ಟು ನಾನು ಹೊರಗೆ ಹೋಗಲ್ಲ. ನಾನು ಎಂದಿಗೂ ಚನ್ನಪಟ್ಟಣ ಕ್ಷೇತ್ರ ಬಿಡಲ್ಲ. ಕೆಲವರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ‌ ಕ್ಷೇತ್ರ ಬಿಡುವುದಿದ್ದರೆ ನಾನು ಚನ್ನಪಟ್ಟಣದಲ್ಲಿ ಯಾಕೆ ಓಡಾಡುತ್ತಿದ್ದೇ. ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಯತ್ನ ಪಡುತ್ತಿದ್ದೇನೆ. ರಾಮನಗರ-ಚನ್ನಪಟ್ಟಣ ನನ್ನ ಎರಡು ಕಣ್ಣು. ನಾನು ಸಾಯುವುದರೊಳಗೆ ರಾಮನಗರ-ಚನ್ನಪಟ್ಟಣವನ್ನು ಅವಳಿ ನಗರ ಮಾಡುತ್ತೇನೆ ಎಂದು ಭರವಸೆ ನೀಡಿದರು.Congress -Rajabhawan Chalo- Former CM -HD Kumaraswamy

ಹುಬ್ಬಳ್ಳಿ-ಧಾರವಾಡದ ರೀತಿ ನಗರಪಾಲಿಕೆಯಾಗಿ ಮಾಡುತ್ತೇನೆ. ಈ ಎರಡೂ ಕ್ಷೇತ್ರ ನನ್ನ ಕಣ್ಣುಗಳು, ಕಳೆದುಕೊಂಡರೆ ನಾನು ಕುರುಡಾಗುತ್ತೇನೆ. ಹಾಗಾಗಿ ರಾಮನಗರ, ಚನ್ನಪಟ್ಟಣ ಕ್ಷೇತ್ರಗಳನ್ನು ಬಿಡುವ ಪ್ರಶ್ನೆಯೇ ಇಲ್ಲ. ಇಲ್ಲದಿದ್ದರೆ ಈ ಎರಡೂ ಕ್ಷೇತ್ರಗಳಲ್ಲಿ ನಿರಂತರ ಪ್ರವಾಸ ಕೈಗೊಳ್ಳುವ ಪ್ರಮೇಯವೇ ಎದುರಾಗುತ್ತಿರಲಿಲ್ಲ.  ಇಂತಹ ಪುಕಾರುಗಳಿಗೆ ಕವಡೆ ಕಾಸಿನ ಕಿಮ್ಮತ್ತೂ ಕೊಡಬೇಡಿ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದರು.

ರಾಮನಗರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ . ಯಾರು ಬೇಕಾದರೂ ಬಂದು ಸ್ಪರ್ಧೆ ಮಾಡಲಿ. ನನ್ನ ವಿರೋಧವಿಲ್ಲ, ವೈಯಕ್ತಿಕ ಸ್ನೇಹ ಬೇರೆ, ರಾಜಕೀಯ ಬೇರೆ. ಆದರೆ ನಾನು ಬದುಕಿರೋವರೆಗೂ ರಾಮನಗರ-ಚನ್ನಪಟ್ಟಣದ ಜನ ನನ್ನ ಕೈಬಿಡಲ್ಲ. ಆ ನಂಬಿಕೆ ಸದಾ ನನಗಿದೆ. ಅವರೇ ಬೆಳೆಸಿದ ಮಗು ನಾನು. ಕೊನೆಗೆ ಅವರೇ ಚಿವುಟುತ್ತಾರ. ಹಾಗಾಗಿ ನನಗೆ ವಿಶ್ವಾಸವಿದೆ. ರಾಮನಗರ-ಚನ್ನಪಟ್ಟಣದ ಜನ ನನ್ನ ಕೈಬಿಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: Congress -Rajabhawan Chalo- Former CM -HD Kumaraswamy