ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ  ಉಗ್ರರಿಗೆ ಬೆಂಬಲ ಕೊಡುತ್ತೆ- ನಳೀನ್ ಕುಮಾರ್ ಕಟೀಲ್.

ಮಂಗಳೂರು,ಡಿಸೆಂಬರ್,16,2022(www.justkannada.in):  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಉಗ್ರರಿಗೆ ಬೆಂಬಲ ಕೊಡುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.

ವೋಟರ್ ಐಡಿ ಹಗರಣ ಮುಚ್ಚಿಹಾಕಲು ಕುಕ್ಕರ್ ಬ್ಲಾಸ್ಟ್ ಷಡ್ಯಂತ್ರ ಎಂದು ಹೇಳಿಕೆ  ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ವಿರುದ್ಧ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್  ಹೇಳಿಕೆ ನೀಡಿರುವುದು ಖಂಡನೀಯ. ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೇಕೋರರನ್ನ ಕಾಂಗ್ರೆಸ್ ಬೆಂಬಲಿಸಿತ್ತು. ಉಗ್ರರು ಎನ್  ಕೌಂಟರ್ ಆದರೆ ಕಾಂಗ್ರೆಸ್ ಅಧ್ಯಕ್ಷರು ಕಣ್ಣೀರು ಹಾಕುತ್ತಾರೆ.  ಕಾಂಗ್ರೆಸ್ ನಾಯಕರು ಶಾರಿಕ್ ಪರ ಹೇಳಿಕೆ ಕೊಟ್ಟಿದ್ದರು. ಇದೀಗ ಕಾಂಗ್ರೆಸ್ ಅಧ್ಯಕ್ಷರೇ ಭಯೋತ್ಪಾದನೆಗೆ ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕಕ್ಕೆ ಬಂದರೇ ಉಗ್ರರಿಗೆ ಬೆಂಬಲ ಕೊಡುತ್ತದೆ ಎಂದು ನಳೀನ್ ಕುಮಾರ್ ಕಟೀಲ್ ಹರಿಹಾಯ್ದರು.

Key words: Congress – support- terrorists – comes – power – Naleen Kumar Kateel.