ಕೆಲಸ ಖಾಯಂಗೆ ಆಗ್ರಹ: ಜು.8 ರಿಂದ ಕೆಲಸ ಸ್ಥಗಿತಗೊಳಿಸಲು ಗುತ್ತಿಗೆ ವೈದ್ಯರ ನಿರ್ಧಾರ….

ಬೆಂಗಳೂರು,ಜು,7,2020(www.justkannada.in): ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಗುತ್ತಿಗೆ ವೈದ್ಯರು ಇಂದು ಉಪವಾಸದಿಂದ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.jk-logo-justkannada-logo

ರಾಜ್ಯದಲ್ಲಿ 507 ಗುತ್ತಿಗೆ ವೈದ್ಯರು ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಸೇವಾ ಖಾಯಮಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದು ಇಂದು ಉಪವಾಸವಿದ್ದು ಕರ್ತವ್ಯಕ್ಕೆ ಹಾಜರಾಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಹಲವಾರು ಬಾರಿ ಸರ್ಕಾರಕ್ಕೆ ಮಾಡಿದ ಮನವಿ ವಿಫಲವಾದ ಹಿನ್ನೆಲೆಯಲ್ಲಿ ಜುಲೈ 8ರಿಂದ(ನಾಳೆ) ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.contracting-doctor-discontinue-work-july-8-protest-job-permanent

ನಾವು ಉಪವಾಸ ಇದ್ದುಕೊಂಡು ಕೆಲಸ ಮಾಡುತ್ತೇವೆ. ಅಧಿಕಾರಿಗಳ ಹೊಟ್ಟೆ ತಣ್ಣಗಿರಲಿ. ಸೇವೆ ಖಾಯಂ ಮಾಡದಿದ್ದರೇ ನಾಳೆಯಿಂದ ಕರ್ತವ್ಯ ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ ಎಂದು ಗುತ್ತಿಗೆ ವೈದ್ಯರು ತಿಳಿಸಿದ್ದಾರೆ. ನಿನ್ನೆ ಕಪ್ಪುಪಟ್ಟಿ ಧರಿಸುವ ಮೂಲಕ ಗುತ್ತಿಗೆ ವೈದ್ಯರು ಪ್ರತಿಭಟನೆ ನಡೆಸಿದ್ದರು.

Key words: contracting -doctor – discontinue- work – July 8-protest- job- permanent