“ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು”

ಮೈಸೂರು,ಫೆಬ್ರವರಿ,10,2021(www.justkannada.in) : ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ.jk

ಹಂದನಹಳ್ಳಿ ಗ್ರಾಮದ ಗೇಟ್ ಬಳಿ ಘಟನೆ ನಡೆದಿದ್ದು, ಹುಣಸೂರು ತಾಲ್ಲೂಕಿನ ಗ್ರಾಮದ ಆರೋಪಿ ಜಯಂತ್ ಕಾಲಿಗೆ ಗುಂಡು ಹಾರಿಸಲಾಗಿದೆ.cops-Sliced-Keep going-escape-Tried-Accused-Shot-leg

ಜನವರಿ 22 ರಂದು ಕ್ಷುಲ್ಲಕ ಕಾರಣಕ್ಕೆ ಜಯಂತ್ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದ. ಮಾರಣಾಂತಿಕ ಹಲ್ಲೆಯ ದೃಶ್ಯ ಮೊಬೈಲ್‌‌ನಲ್ಲಿ ಸೆರೆಯಾಗಿತ್ತು. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಹಿನ್ನೆಲೆ ಜಯಂತ್,ವಿಘ್ನೇಶ್, ದೀಪಕ್‌ನನ್ನು ಪೊಲೀಸರು ಬಂಧಿಸಿದರು. ಆರೋಪಿಗಳು ಹಂದರಹಳ್ಳಿ ಬಳಿ ಹೆಡ್ ಕಾನ್ಸ್‌ಟೇಬಲ್ ರವಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಎಸ್‌ಐ ಜಯಪ್ರಕಾಶ್ ಆರೋಪಿ ಜಯಂತ್ ಕಾಲಿಗೆ ಗುಂಡು ಹಾರಿಸಿದ್ದಾರೆ.ಆರೋಪಿ ಜಯಂತ್ ಹಾಗೂ ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಪೇದೆಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

key words : cops-Sliced-Keep going-escape-Tried-Accused-Shot-leg