ಕೊರೋನಾ ಸಾವಿನ ಅಂಕಿ ಸಂಖ್ಯೆ ಬಗ್ಗೆ ಸುಳ್ಳು ಮಾಹಿತಿ ಆರೋಪ: ಸಚಿವ ಸುಧಾಕರ್ ವಿರುದ್ದ ಹೆಚ್.ಕೆ ಪಾಟೀಲ್ ಕಿಡಿ…

ಬೆಂಗಳೂರು,ಸೆಪ್ಟಂಬರ್,3,2020(www.justkannada.in): ವೈದ್ಯಕೀಯ ಶಿಕ್ಷಣ ಸಚಿವರೇ ಸಾವಿನ ಅಂಕಿ-ಸಂಖ್ಯೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ. ಸುಳ್ಳು ಮಾಹಿತಿಗಳನ್ನು ಜನರಿಗೆ ನೀಡಿ ಸಮರ್ಥನೆಗಳನ್ನು ಮಾಡಿಕೊಳ್ಳುವ ನಿಮ್ಮ ಪ್ರಯತ್ನ. ಸಂಕಷ್ಟದ ಈ ಕಾಲದಲ್ಲಿ ಆಘಾತಕಾರಿ ಎಂದು ಸಚಿವ ಡಾ.ಕೆ ಸುಧಾಕರ್ ವಿರುದ್ದ ಮಾಜಿ ಸಚಿವ ಹೆಚ್.ಕೆ ಪಾಟೀಲ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಕೆ ಪಾಟೀಲ್,  ವೈದ್ಯಕೀಯ ಶಿಕ್ಷಣ ಸಚಿವರೇ ಸಾವಿನ ಅಂಕಿ-ಸಂಖ್ಯೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ. ಭಾರತದಲ್ಲಿ ಸಾವಿನ ಸಂಖ್ಯೆ ದಶಲಕ್ಷಕ್ಕೆ 42. ಕರ್ನಾಟಕದಲ್ಲಿ ದಶಲಕ್ಷಕ್ಕೆ 83 ಇದೆ. ನೆನಪಿರಲಿ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಜನೇವರಿಯಿಂದ ಜುಲೈವರೆಗೆ ಶೇ. 32ರಷ್ಟು ಹೆಚ್ಚಳ ಕಂಡಿದೆ.corona-accused-false-information-about-death-hk-patil-against-minister-sudhakar

ಸುಳ್ಳು ಮಾಹಿತಿಗಳನ್ನು ಜನರಿಗೆ ನೀಡಿ ಸಮರ್ಥನೆಗಳನ್ನು ಮಾಡಿಕೊಳ್ಳುವ ನಿಮ್ಮ ಪ್ರಯತ್ನ. ಸಂಕಷ್ಟದ ಈ ಕಾಲದಲ್ಲಿ ಆಘಾತಕಾರಿ.  ಸತ್ಯವಾದ ಮಾಹಿತಿ ಜನರ ಜೊತೆಗೆ ಹಂಚಿಕೊಳ್ಳಿ, ಕೊರತೆಗಳನ್ನು ನೀಗಿಸಲು ಯುದ್ದೋಪಾದಿಯಲ್ಲಿ ಕೆಲಸ ಮಾಡಲು ಆಡಳಿತ ಯಂತ್ರ ಚುರುಕುಗೊಳಿಸಿ ಎಂದು ಸಲಹೆ ನೀಡಿದ್ದಾರೆ.

Key words: Corona-accused – false information- about – death – HK Patil – against -Minister Sudhakar