ನೈಟ್ ಕರ್ಫ್ಯೂ ಬಗ್ಗೆ ಸಿಎಂ ಜತೆ ಚರ್ಚಿಸಿ ತೀರ್ಮಾನ- ಸಚಿವ ಡಾ.ಕೆ.ಸುಧಾಕರ್….

ಬೆಂಗಳೂರು,ಡಿಸೆಂಬರ್,22,2020(www.justkannada.in): ದೇಶಾದ್ಯಂತ ಹೊಸ ಕೊರೋನಾ ಭೀತಿ ಎದುರಾಗಿದ್ದು, ಕೊರೋನಾ ರೂಪಾಂತರ ಪತ್ತೆಯಾದ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಕಟ್ಟಿನಿಟ್ಟಾಗಿ ತಪಾಸಣೆ ಮಾಡಲಾಗುತ್ತಿದ್ದು ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ.Teachers,solve,problems,Government,bound,Minister,R.Ashok

ಹೊಸ ಕೊರೋನಾ ಪ್ರಭೇದ ಪತ್ತೆಯಾದ ಹಿನ್ನೆಲೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಕುರಿತು ಚರ್ಚೆಯಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೊರೋನಾ ರೂಪಾಂತರ ಪತ್ತೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನೈಟ್ ಕರ್ಫ್ಯೂ ವಿಧಿಸಬಹುದು. ನೈಟ್ ಕರ್ಫ್ಯೂ ಬಗ್ಗೆ ಸಿಎಂ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.corona-discuss-night-curfew-cm-minister-dr-k-sudhakar

ಇನ್ನೊಂದೆಡೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಸದ್ಯಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Key words:  corona-Discuss -night curfew – CM – Minister- Dr K Sudhakar