ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ತುರ್ತು ಸಭೆ ಕರೆದ ಮೇಯರ್…

ಬೆಂಗಳೂರು,ಜೂ,23,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ಏರುತ್ತಲೇ ಇದ್ದು ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್  ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮೇಯರ್ ಗೌತಮ್ ಕುಮಾರ್ ಬಿಬಿಎಂಪಿ ಅಧಿಕಾರಿಗಳ ಸಭೆ ಕರೆದಿದ್ದಾರೆ. ನಿನ್ನೆ ವಿಕ್ಟೋರಿಯಾ ಮತ್ತು ಬೌರಿಂಗ್ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲವೆಂದು ಚಿಕ್ಕಪೇಟೆ ಮೂಲಕದ ಮೂವರು ಸೋಂಕಿತರನ್ನ ವಾಪಸ್ ಕಳುಹಿಸಿದ ಆರೋಪ ಕೇಳಿ ಬಂದಿದೆ. ಹೀಗಾಗಿ ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಹಾಗೆಯೇ ಸೀಲ್ ಡೌನ್ ಆದ ಏರಿಯಾಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.Corona- Increase –Bangalore-Mayor - emergency meeting

ಇನ್ನು ಇಂದು ಮೇಯರ್ ಗೌತಮ್ ಕುಮಾರ್  ಕೊರೋನಾ ಸೋಂಕು ಇರುವ ಕಲಾಸಿ ಪಾಳ್ಯ ಏರಿಯಾಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Corona- Increase –Bangalore-Mayor – emergency meeting