ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ…?

ಬೆಂಗಳೂರು,ಮೇ,7,2021(www.justkannada.in):  ರಾಜ್ಯದಲ್ಲಿ ಜನತಾ ಕರ್ಫ್ಯೂ ಸರಿಯಾಗಿ ಜಾರಿಯಾಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೇ ಲಾಕ್ ಡೌನ್ ಅನಿವರ್ಯ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.jk

ರಾಜ್ಯದಲ್ಲಿ ಕೊರೊನಾ ಸೋಂಜಕಿನ ಪ್ರಮಾಣ ಹೆಚ್ಚುತ್ತಿದ್ದು ಹೀಗಾಗಿ  ಹಲವರು ರಾಜ್ಯ ಲಾಕ್ ಡೌನ್ ಮಾಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ  ಸಿಎಂ ಬಿಎಸ್ ಯಡಿಯೂರಪ್ಪ, ಕರ್ಫ್ಯೂ ಸರಿಯಾಗಿ ಜಾರಿಯಾಗುತ್ತಿಲ್ಲ. ಹೀಗಾಗಿ ಕಠಿಣ ಕ್ರಮ ಅನಿವಾರ್ಯ ಆಗಬಹುದು. ಇಂದು ಅಥವಾ ನಾಳೆ ಸಭೆ ನಡೆಸಿ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.corona-increase- CM BS Yeddyurappa-complete -lockdown – state-meeting

ಬೆಡ್ ಗಾಗಿ ನನ್ನ ಮನೆ ಬಳಿ ಬರಬೇಡಿ. ವಿಧಾನಸೌಧಕ್ಕು ಹೋಗಬೇಡಿ. ಅಧಿಕಾರಿಗಳ ಗಮನಕ್ಕೆ ತನ್ನಿ. ತುರ್ತು ಇರುವವರಿಗೆ ಬೆಡ್ ವ್ಯವಸ್ಥೆ ಮಾಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words:  corona-increase- CM BS Yeddyurappa-complete -lockdown – state-meeting