ಕೊರೋನಾ ಹೆಚ್ಚಳ ಹಿನ್ನೆಲೆ: ಇಂದು ಕೇಂದ್ರ ಆರೋಗ್ಯ ಸಚಿವರಿಂದ 11 ರಾಜ್ಯಗಳ ಆರೋಗ್ಯ ಸಚಿವರ ಜತೆ ಸಭೆ….

ನವದೆಹಲಿ,ಏಪ್ರಿಲ್,6,2021(www.justkannada.in):  ದೇಶದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿದ್ದು, ಪ್ರತಿದಿನದ ಕೇಸ್ ಗಳಲ್ಲಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ 11 ರಾಜ್ಯಗಳ ಆರೋಗ್ಯ ಸಚಿವರ ಜತೆ ಸಭೆ ನಡೆಸಿ ಚರ್ಚಿಸಲಿದ್ದಾರೆ.Illegally,Sand,carrying,Truck,Seized,arrest,driver

ಇಂದು ಸಂಜೆ 6 ಗಂಟೆಗೆ  ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್  11 ರಾಜ್ಯಗಳ ಆರೋಗ್ಯ ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ಕೊರೋನಾ ಪ್ರಕರಣಗಳು ಹೆಚ್ಚಾಗಿರುವ ರಾಜ್ಯಗಳ ಸಚಿವರ ಜತೆ ಸಭೆ ನಡೆಯಲಿದ್ದು, ಸಭೆಯಲ್ಲಿ ಕೊರೋನಾ ನಿರ್ವಹಣೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.corona-increase-meeting-union-health-minister-today

ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭಾಗಿಯಾಗಿ ರಾಜ್ಯದ ಕೊರೋನಾ ಪರಿಸ್ಥಿತಿ ತಿಳಿಸಲಿದ್ದಾರೆ.  ಹಲವು ಪ್ರಮುಖ ವಿಚಾರಗಳ ಕುರಿತು ಯೂನಿಯನ್ ಮಿನಿಸ್ಟರ್ ಹರ್ಷವರ್ಧನ್ ಅವರ ಜೊತೆ ಸಚಿವ ಸುಧಾಕರ್ ಚರ್ಚೆ ನಡೆಸಲಿದ್ದಾರೆ.

Key words: Corona -increase -Meeting -Union Health Minister- today