ಮೈಸೂರಿನಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು….

ಮೈಸೂರು,ಜು,24,2020(www.justkannada.in):  ಕೊರೋನಾ ಸೋಂಕು ತಗುಲಿದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.jk-logo-justkannada-logo

ನಗರದ ಗೊಂಕುಲಂನಲ್ಲಿ ಈ ಘಟನೆ ನಡೆದಿದೆ. ಗೋಕುಲಂ ನಿವಾಸಿಯಾಗಿದ್ದ 54 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಮೃತ ವ್ಯಕ್ತಿ ಜೆ.ಕೆ ಟೈರ್ಸ್ ನಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ವ್ಯಕ್ತಿಗೆ ಕೊರೋನಾ ಸೋಂಕು ದೃಢವಾಗಿತ್ತು.corona-infected-person-suicide-mysore

ಸೋಂಕಿತ ವ್ಯಕ್ತಿಗೆ ಕೆ ಎಸ್ ಓ ಯು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು . ನಂತರ ವೈದ್ಯರು ಹೋಂ ಐಸೋಲೇಷನ್  ಚಿಕಿತ್ಸೆ ಪಡೆಯಲು ಸೂಚಿಸಿದ್ದರು. ಹೀಗಾಗಿ ನಿನ್ನೆಯಷ್ಟೇ ಕೋವಿಡ್ ಸೆಂಟರ್ ನಿಂದ ಬಿಡುಗಡೆ ಆಗಿದ್ದ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿ ನಿವಾಸದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಇಂದು ನೇಣಿ ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆಯಾಗಿದ್ದಾರೆ. ಈ ಕುರಿತು ವಿ‌ ವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Corona-infected –person-suicide – Mysore